ನಮ್ಮ ಹುಡುಗರು ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪೇಂದ್ರ, ಪ್ರಿಯಾಂಕಾ ಮತ್ತಿತರರು 
ಸಿನಿಮಾ ಸುದ್ದಿ

ನಟ ನಿರಂಜನ್ ಗೆ ವಿಷ್ಣುದಾದ ಆಶೀರ್ವಾದ ಸಿಕ್ಕಿದೆ- ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೀರೋ ಆಗಿ ನಟಿಸಿರುವ 'ನಮ್ಮ ಹುಡುಗರು' ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೀರೋ ಆಗಿ ನಟಿಸಿರುವ 'ನಮ್ಮ ಹುಡುಗರು' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಶನಿವಾರ ಟೀಸರ್ ಬಿಡುಗಡೆಗೊಳಿಸಿ ಚಿತ್ರ ತಂಡಕ್ಕೆ ಶುಭ ಕೋರಿದರು. 

ನಂತರ ಮಾತನಾಡಿದ ಉಪೇಂದ್ರ, 'ಟೀಸರ್ ಅದ್ಭುತವಾಗಿದೆ. ಇದರಲ್ಲಿ ವಿಷ್ಣು ದಾದಾ ಅವರ ಕಟೌಟ್ ನಿಂದ ನಿರಂಜನ್  ಮೇಲೆ ಹೂವಿನ ಹಾರ ಬೀಳುವಂತೆ ಇಂಟ್ರೊಡಕ್ಷನ್ ಸೀನ್ ಮಾಡಲಾಗಿದೆ. ಅದು ಬಹಳ ಇಷ್ಟ ಆಯ್ತು, ನಿರಂಜನ್ ಮೊದಲು ಬಣ್ಣ ಹಚ್ಚಿದ್ದೇ ವಿಷ್ಣುವರ್ಧನ್ ಅವರ ಸಿನಿಮಾದಲ್ಲಿ. ನಿರಂಜನ್ ಬಹಳ ಅದೃಷ್ಟವಂತ. ವಿಷ್ಣುವರ್ಧನ್ ಅವರ 'ಬಳ್ಳಾರಿ ನಾಗ' ಚಿತ್ರದಲ್ಲಿ ಅವರ ಬಾಲ್ಯದ ಪಾತ್ರವನ್ನು ನಿರಂಜನ್ ಮಾಡಿದ್ದ. ಈಗ ಟೀಸರ್ ನಲ್ಲಿ ಈ ರೀತಿ ತೋರಿಸಿರುವುದು, ಅವರೇ ಇವನಿಗೆ ಆಶೀರ್ವಾದ ಮಾಡಿದಂತೆ ಇದೆ' ಎಂದು ಹೊಗಳಿದರು.

ನಾಯಕ ನಟ ನಿರಂಜನ್ ಮಾತನಾಡಿ, ಮೂರು ವರ್ಷದ ಹಿಂದೆ ಶುರುವಾದ ಜರ್ನಿ  ಈಗ ಸಿನಿಮಾ ಸಂಪೂರ್ಣಗೊಂಡಿದ್ದು, ರಿಲೀಸ್ ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದರ ಮೊದಲ ಭಾಗವಾಗಿ ಈಗ ಟೀಸರ್ ರಿಲೀಸ್ ಮಾಡಿದ್ದೇವೆ. ಈ ಸಿನಿಮಾದಲ್ಲಿ ನಾನು ಮಂಡ್ಯದ ಕಡೆಯು ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿದ್ದೇನೆ. ಭರಮ ಅನ್ನೋದು ನನ್ನ ಪಾತ್ರದ ಹೆಸರು. ನನ್ನ ಜರ್ನಿ ಶುರುವಾಗಿದ್ದೇ ವಿಷ್ಣು ಸರ್ ಅವರ 'ಬಳ್ಳಾರಿ ನಾಗ' ಸಿನಿಮಾದ ಮೂಲಕ. ಇದೀಗ ಸಿನಿಮಾದಲ್ಲೂ ಅವರಿಗೆ ಕನೆಕ್ಷನ್ ಇರುವಂತಹ ಸೀನ್ ಇದೆ. ಆ ಸೀನ್ ತುಂಬ ಹೈಲೈಟ್ ಆಗಿದೆ. ವಿಷ್ಣು ಅವರ ಆಶೀರ್ವಾದ ಇದೆ ನನಗೆ' ಎಂದು ಹೇಳಿಕೊಂಡರು.

ಚಿತ್ರದಲ್ಲಿ ನಾಯಕಿಯಾಗಿ ರಾಧ್ಯಾ ಕಾಣಿಸಿಕೊಂಡಿದ್ದಾರೆ. ಇದು ಅವರಿಗೆ ಚೊಚ್ಚಲ ಸಿನಿಮಾ. ಶರತ್  ಲೋಹಿತಾಶ್ವ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್ , ಆಲ್ ಓಕೆ ಅಲೋಕ್ ಮುಂತಾದವರು ನಟಿಸಿದ್ದಾರೆ. ಎಚ್.ಬಿ.ಸಿದ್ದು ಇದರ ನಿರ್ದೇಶಕರು. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ . ಚಿತ್ರವನ್ನು ಕೆ.ಕೆ. ಅಶ್ರಫ್ ನಿರ್ಮಾಣ ಮಾಡಿದ್ದಾರೆ. 'ನಮ್ಮ ಹುಡುಗರು' ಚಿತ್ರದ ಹಾಡುಗಳಿಗೆ ಅಭಿಮಾನ್ ರಾಯ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿದಾನಂದ್ ಛಾಯಾಗ್ರಹಣ ಮಾಡಿದ್ದು, ದೀಪು ಎಸ್. ಕುಮಾರ್ ಸಂಕಲನ ನಿಭಾಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!