ಕಿಚ್ಚ ಸುದೀಪ 
ಸಿನಿಮಾ ಸುದ್ದಿ

''ಉಸಿರೇ ಉಸಿರೇ'' ಮೋಷನ್ ಫೋಸ್ಟರ್ ಬಿಡುಗಡೆ; ಹಿರೋ ರಾಜೀವ್ ಗೆ ಕಿಚ್ಚನ ಹಾರೈಕೆ

ಈ ಬಾರಿಯ ಬಿಗ್ ಬಾಸ್ ನಲ್ಲಿ ಭಾಗವಹಿಸಿದ್ದ ರಾಜೀವ್ "ಉಸಿರೇ ಉಸಿರೇ" ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದ ಕಿಚ್ಚ ಸುದೀಪ ಚಿತ್ರ ತಂಡಕ್ಕೆ ಶುಭ ಹಾರೈಸಿದರು.  

ಬೆಂಗಳೂರು: ಈ ಬಾರಿಯ ಬಿಗ್ ಬಾಸ್ ನಲ್ಲಿ ಭಾಗವಹಿಸಿದ್ದ ರಾಜೀವ್ "ಉಸಿರೇ ಉಸಿರೇ" ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದ ಕಿಚ್ಚ ಸುದೀಪ ಚಿತ್ರ ತಂಡಕ್ಕೆ ಶುಭ ಹಾರೈಸಿದರು.  

“ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ರಾಜೀವ. ಅವನಲ್ಲಿ ಈಗಲೂ ಏನೋ ಒಂಥರ ಮುಗ್ಧತೆ ಇದೆ. ಎಲ್ಲವನ್ನೂ ಬೇಗ ನಂಬಿ ಬಿಡುತ್ತಾನೆ. ಪುಣ್ಯ. ಅವನ ಪಕ್ಕದಲ್ಲಿರುವ ಹೆಂಡತಿ ಜಾಣೆ. ಆ ಹುಡುಗಿ ಇವನಿಗೆ ಎಲ್ಲವನ್ನೂ ಹೇಳಿ ಕೊಡುತ್ತಿದ್ದಾರೆ. ಸಿ.ಸಿ.ಎಲ್ ದಿನಗಳಿಂದಲೂ ನನಗೆ ಈತ ಪರಿಚಯ. ಅವನು ಕ್ರಿಕೆಟ್ ಸರಿಯಾಗಿ ಅಭ್ಯಾಸ ಮಾಡಿದ್ದರೆ, ಇಷ್ಟೊತ್ತಿಗೆ ರಾಜ್ಯ ಮಟ್ಟದಲ್ಲಿ ಆಡುತ್ತಿದ್ದ. ಈ ಸಿನಿಮಾದಿಂದ ರಾಜೀವ್ ಗೆ ಒಳ್ಳೆಯದಾಗಲಿ” ಎಂದರು.

ಕಿಚ್ಚ ಸುದೀಪ್​ ಅವರಿಗೆ ಚಿತ್ರತಂಡ ಬೆಳ್ಳಿ ಪೆನ್ ​ಅನ್ನು ಉಡುಗರೆಯಾಗಿ ನೀಡಿದರು. ಈ ಪೆನ್​ ಅನ್ನು ಸುದೀಪ್​ ಅವರು ನಿರ್ದೇಶಕರಿಗೆ ನೀಡಿ, ನಿಮ್ಮ ಮುಂದಿನ ಕೆಲಸಗಳೆಲ್ಲಾ ಸುಲಲಿತವಾಗಿ ನಡೆಯಲಿ ಎಂದು ಹಾರೈಸಿದರು. ನಮ್ಮ ನಾಲ್ಕು ವರ್ಷಗಳ ಶ್ರಮಕ್ಕೆ ಈಗ ಉತ್ತಮ ಕಾಲ ಕೂಡಿ ಬಂದಿದೆ.‌ ಎಲ್ಲರ ಹಾರೈಕೆಯು ನಮಗಿರಲಿ’ ಎಂದು ಕೋರಿದರು ರಾಜೀವ್​.

ಎನ್ ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರದೀಪ್ ಯಾದವ್  ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಾಜೀವ್​ಗೆ ನಾಯಕಿಯಾಗಿ ಶ್ರೀಜಿತ ಘೋಷ್ ನಟಿಸುತ್ತಿದ್ದಾರೆ. ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜಿಸುತ್ತಿದ್ದು, ಶರವಣನ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT