ಶೃತಿ 
ಸಿನಿಮಾ ಸುದ್ದಿ

ಕಾಮುಕರನ್ನು ಬಂಧಿಸುವ ಕಾನೂನು ಗಟ್ಟಿಯಾಗಬೇಕು: ಮೈಸೂರು ಗ್ಯಾಂಗ್ ರೇಪ್ ಬಗ್ಗೆ ನಟಿ ಶ್ರುತಿ ಪೋಸ್ಟ್ ವೈರಲ್

ಮೈಸೂರು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶೃತಿ ಪ್ರತಿಕ್ರಿಯೆ ನೀಡಿದ್ದಾರೆ, ಈ ಸಂಬಂಧ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರು: ಮೈಸೂರು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶೃತಿ ಪ್ರತಿಕ್ರಿಯೆ ನೀಡಿದ್ದಾರೆ, ಈ ಸಂಬಂಧ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಬೇಸರಗೊಂಡಿರುವ ನಟಿ ಶ್ರುತಿ, ಅನಿಷ್ಟ ಕಾಮುಕರನ್ನು ಬಂಧಿಸುವ ಕಾನೂನು ಇನ್ನೂ ಗಟ್ಟಿಯಾಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ. 

ಪುರುಷರು ಬೆಳೆಯುವ ಮನೆಯ ವಾತಾವರಣ, ಸಂಸ್ಕಾರ ಮತ್ತು ಪೋಷಕರ ಜವಾಬ್ದಾರಿ ಕೂಡ ಗಟ್ಟಿಯಾಗಬೇಕು ಎಂದು ನಟಿ ಶ್ರುತಿ ಅಭಿಪ್ರಾಯ ಪಟ್ಟಿದ್ದಾರೆ.ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ? ಇಂತಹ ಪುರುಷರ ಮನಃಸ್ಥಿತಿ ಬದಲಾಗುವುದೆಂದು? ಇಂತಹ ಅನಿಷ್ಟ ಕಾಮುಕರನ್ನು ಬಂಧಿಸುವ, ಅವರನ್ನು ಶಿಕ್ಷಿಸುವ ಕಾನೂನು ಮತ್ತಷ್ಟು ಗಟ್ಟಿಯಾಗಬೇಕು ಎನ್ನುವುದು ಎಷ್ಟು ಸತ್ಯವೋ, ಇಂತಹ ಪುರುಷರು ಬೆಳೆಯುವ ಮನೆಯ ವಾತಾವರಣ, ಸಂಸ್ಕಾರ, ಪೋಷಕರ ಜವಾಬ್ದಾರಿಯಲ್ಲಿಯೂ ಕೂಡ ಮತ್ತಷ್ಟು ಗಟ್ಟಿಯಾಗಬೇಕು ಎನ್ನುವುದು ನನ್ನ ಅಭಿಪ್ರಾಯ ಹೌದಲ್ಲವೇ...

ಹುಟ್ಟಿನಿಂದ ಸಾವಿನವರೆಗೆ ಹೆಣ್ಣು ಮಕ್ಕಳು ಅನುಭವಿಸುವ ಕಷ್ಟ ನೂರಾರು. ಆದರೂ ಹಲವಾರು ಮಹಿಳೆಯರು ಅದನ್ನು ಹಿಮ್ಮೆಟ್ಟಿ ಇಡೀ ಭಾರತವೇ ಮೆಚ್ಚುವಂತಹ ಸಾಧನೆಯನ್ನು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರದ ಘಟನೆಗಳು ಮಹಿಳೆಯ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುತ್ತದೆ. ಹಾಗಾಗದಿರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ಶ್ರುತಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!