ದಿಗಂತ್ 
ಸಿನಿಮಾ ಸುದ್ದಿ

ದಿಗಂತ್- ಕೆಎಂ ಚೈತನ್ಯ ಕಾಂಬಿನೇಷನ್ ನಲ್ಲಿ ಬರ್ತಿದೆ ಕಾಮಿಡಿ ಸಿನಿಮಾ!

ದೂದ್ ಪೇಡ ದಿಗಂತ್ ಮತ್ತು ಆ ದಿನಗಳು ಖ್ಯಾತಿಯ ಕೆಎಂ ಚೈತನ್ಯ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾವೊಂದು ಸಿದ್ಧವಾಗುತ್ತಿದೆ. 

ದೂದ್ ಪೇಡ ದಿಗಂತ್ ಮತ್ತು ಆ ದಿನಗಳು ಖ್ಯಾತಿಯ ಕೆಎಂ ಚೈತನ್ಯ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾವೊಂದು ಸಿದ್ಧವಾಗುತ್ತಿದೆ. 

ಸಿನಿಮಾ ಸಂಬಂಧ ಮಾತುಕತೆಗಳು ನಡೆಯುತ್ತಿದೆ, ಇದೊಂದು ಕಾಮಿಡಿ ಸಿನಿಮಾವಾಗಿದ್ದು, ಕಥೆ ಸಂಬಂಧ ಚರ್ಚೆಗಳು ನಡೆಯುತ್ತಿವೆ.

ಮಲಯಾಳಂ ಪ್ರಸಿದ್ಧ ನಟರೊಬ್ಬರು ಸಿನಿಮಾ ನಿರ್ಮಾಣಕ್ಕೆ ಬಂಡವಾಲ ಹೂಡುತ್ತಿದ್ದಾರೆ, ಸೆಪ್ಟಂಬರ್ ತಿಂಗಳಲ್ಲಿ ಶೂಟಿಂಗ್ ಆರಂಭಿಸಲು ನಿರ್ದೇಶಕರು ಯೋಜಿಸಿದ್ದಾರೆ. ಸಿನಿಮಾದ ನಿರ್ಮಾಪಕರು, ಉಳಿದ ಕಲಾವಿದರ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು.

ಆ ದಿನಗಳು, ಸೂರ್ಯಕಾಂತಿ, ಪರಾರಿ, ಆಟಗಾರ, ಆಕೆ, ಅಮ್ಮ ಐ ಲವ್ ಯೂ ಮತ್ತು ಆದ್ಯ ಸಿನಿಮಾ ನಿರ್ದೇಶಿಸಿರುವ ಕೆಎಂ ಚೈತನ್ಯ ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾವಾಗಿತ್ತು. 

ಅದಾದ ನಂತರ ಚೈತನ್ಯ ಕಿರುತೆರೆಯಲ್ಲಿ ಕತೆ ಬರೆಯುವುದರಲ್ಲಿ ಬ್ಯುಸಿಯಾಗಿದ್ದರು. ಈಗ ಸದ್ಯ. ದಿಗಂತ್ ಜೊತೆ ಸಿನಿಮಾ ಮಾಡುತ್ತಿದ್ದು, ಸಂಪೂರ್ಣ ಕಾಮಿಡಿ ಚಿತ್ರ ಇದಾಗಿದೆ. 

ಇದರ ನಡುವೆ ದಿಗಂತ್ 'ಹುಟ್ಟು ಹಬ್ಬದ ಶುಭಾಶಯಗಳು' ಬಿಡುಗಡೆಗೆ ಸಿದ್ಧವಾಗಿದೆ. ಅವರು 'ಗಾಳಿಪಟ 2', 'ಮಾರಿಗೋಲ್ಡ್', ಮತ್ತು 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಮುಂತಾದ ಚಿತ್ರಗಳ ಶೂಟಂಗ್ ವಿವಿಧ ಹಂತಗಳಲ್ಲಿವೆ. ಸಮರ್ಥ ಕಡ್ಕೋಲ್ ಚೊಚ್ಚಲ ನಿರ್ದೇಶನದ 'ಎಡಗೈ ಅಪಘಾತಕ್ಕೆ ಕಾರಣ' ಎಂಬ ಚಿತ್ರದಲ್ಲಿಯೂ ಅವರು ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT