ಮಾನ್ವಿತಾ ಮತ್ತು ಪೃಥ್ವಿ ಅಂಬರ್ 
ಸಿನಿಮಾ ಸುದ್ದಿ

'ಹ್ಯಾಪಿಲಿ ಮ್ಯಾರಿಡ್' ಶೀರ್ಷಿಕೆ ಅನಾವರಣಗೊಳಿಸಿದ ಕ್ರೇಜಿಸ್ಟಾರ್ ರವಿಚಂದ್ರನ್

'ದಿಯಾ' ಚಿತ್ರದ ಮೂಲಕ ಗಮನ ಸೆಳೆದ ನಟ ಪೃಥ್ವಿ ಅಂಬರ್‌ ಮತ್ತು  ನಟಿ ಮಾನ್ವಿತಾ ಹರೀಶ್ ಇದೇ ಮೊದಲ ಬಾರಿಗೆ ತೆರೆ ಮೇಲೆ ಮಿಂಚಲು ಒಂದಾಗಿದ್ದಾರೆ. 

ಬೆಂಗಳೂರು: 'ದಿಯಾ' ಚಿತ್ರದ ಮೂಲಕ ಗಮನ ಸೆಳೆದ ನಟ ಪೃಥ್ವಿ ಅಂಬರ್‌ ಮತ್ತು  ನಟಿ ಮಾನ್ವಿತಾ ಹರೀಶ್ ಇದೇ ಮೊದಲ ಬಾರಿಗೆ ತೆರೆ ಮೇಲೆ ಮಿಂಚಲು ಒಂದಾಗಿದ್ದಾರೆ. 

ಸೈಕಾಲಜಿಕಲ್ ಥ್ರಿಲ್ಲರ್ ಸಿನಿಮಾದಲ್ಲಿ ಈ ಜೋಡಿ ಮೋಡಿ ಮಾಡಲು ಸಜ್ಜಾಗಿದೆ. ಈ ಚಿತ್ರಕ್ಕೆ ‘ಹ್ಯಾಪಿಲಿ ಮ್ಯಾರೀಡ್’ ಎಂದು ಹೆಸರಿಡಲಾಗಿದ್ದು, ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಶೀರ್ಷಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಕೊರೊನಾ ಲಾಕ್‌ಡೌನ್‌ನಿಂದ ಬಹಳ ಸೈಲೆಂಟ್ ಆಗಿದ್ದ ನಟಿ ಮಾನ್ವಿತಾ ಇದೀಗ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದೊಂದಿಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಹಿಂದೆ ‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾ ನಿರ್ದೇಶಿಸಿದ್ದ ಎಂ.ಅರುಣ್ ಕುಮಾರ್ ಮತ್ತು ಸಾಬು ಅಲೋಶಿಯಸ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

ಈ ಚಿತ್ರದ ಕಥೆಯು ವಿವಾಹಿತ ದಂಪತಿಗಳ ಸುತ್ತ ಸುತ್ತುತ್ತದೆ. ಈ ಚಿತ್ರವನ್ನು 15 ದಿನಗಳೊಳಗೆ ಚಿತ್ರೀಕರಿಸಲಾಗಿದೆಯಂತೆ. ‘ವ್ಯಂಗ್ಯ ಮತ್ತು ಪ್ರೀತಿಯಿಂದ ಆರಂಭವಾದ ದಾಂಪತ್ಯವು ಹೇಗೆ ವಿಘಟನೆ ಹೊಂದುತ್ತದೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ’ ಎಂದು ಅರುಣ್ ಕುಮಾರ್ ತಿಳಿಸಿದ್ದಾರೆ. 

ಕನ್ನಡ ಅವತರಣಿಕೆಯಲ್ಲಿ ಪೃಥ್ವಿ ಮತ್ತು ಮಾನ್ವಿತಾ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಚಲನಚಿತ್ರವನ್ನು ಫ್ರೈಡೇ ಫಿಲ್ಮ್ಸ್ ಮತ್ತು, ಸಿಲ್ವರ್ ಟ್ರೈನ್ ಇಂಟರ್ನ್ಯಾಷನಲ್ ಮತ್ತು ಟೈನಿ ಹ್ಯಾಂಡ್ಸ್ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಿವೆ.

ಲೈಫ್ ಈಸ್ ಬ್ಯೂಟಿಫುಲ್ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ ನಿರ್ದೇಶಕ ಜೋಡಿಯ ಎರಡನೇ ಪ್ರಯತ್ನವೇ ಹ್ಯಾಪಿಲಿ ಮ್ಯಾರೀಡ್. ಇದರ ಜೊತೆಗೆ ಪೃಥ್ವಿ ಅವರ ಬೈರಾಗಿ, ಫಾರ್ ರೆಗ್ನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮತ್ತು ತಮಿಳು ಚೊಚ್ಚಲ ಸಿನಿಮಾವನ್ನು  ವಿಜಯ್ ಮಿಲ್ಟನ್ ನಿರ್ದೇಶಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT