ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಮಾಸ್ ಸಿನಿಮಾದಿಂದ ಪ್ರೇಕ್ಷಕರು ನಿರೀಕ್ಷಿಸುವ ಎಲ್ಲವೂ ಮದಗಜ ಸಿನಿಮಾದಲ್ಲಿದೆ: ಶ್ರೀಮುರಳಿ

ಮಾಸ್ ಸಿನಿಮಾ ಆದರು ಪ್ರತೀ ಸಿನಿಮಾದಲ್ಲಿಯೂ ಪ್ರೇಕ್ಷಕರಿಗೆ ಹೊಸ ಅನುಭವವನ್ನು ನೀಡುವುದು ನನ್ನ ಜವಾಬ್ದಾರಿ. ಮದಗಜ ಸಿನಿಮಾದಲ್ಲಿಯೂ ಅದನ್ನು ಪಾಲಿಸಿದ್ದೇನೆ ಎಂದಿದ್ದಾರೆ ಶ್ರೀಮುರುಳಿ. ಸಿನಿಮಾ ಡಿ.3 ರಂದು ತೆರೆ ಕಾಣುತ್ತಿದೆ.

ನಾಯಕ ನಟ ಶ್ರೀಮುರಳಿ ಅವರಿಗೆ ಕೆ.ಜಿ.ಎಫ್ ಖ್ಯಾತಿಯ ಪ್ರಶಾಂತ್ ನೀಲ್ ಸಿನಿಮಾ ಉಗ್ರಂ ಟರ್ನಿಂಗ್ ಪಾಯಿಂಟ್ ಎನ್ನುವುದರಲ್ಲಿ ಅನುಮಾನವಿಲ್ಲ. ಮುರುಳಿ ಅಭಿನಯದ ಉಗ್ರಂ ಸಿನಿಮಾ ಹಿಟ್ ಆಗಿದ್ದೇ ತಡ ಅದೇ ಬಗೆಯ ಮಾಸ್ ಸಿನಿಮಾಗಳಾದ ರಥಾವರ, ಭರಾಟೆ ಸಿನಿಮಾಗಳಲ್ಲಿ ಕಾಣೀಸಿಕೊಂಡಿದ್ದರು. 

ಇದೀಗ ಮದಗಜ ಕೂಡಾ ಪಕ್ಕಾ ಮಾಸ್ ಸಿನಿಮಾ ಎನ್ನುವುದನ್ನು ಶ್ರೀಮುರುಳಿ ಅವರು ಹೇಳಿದ್ದು, ಮಾಸ್ ಸಿನಿಮಾದಿಂದ ಪ್ರೇಕ್ಷಕರು ನಿರೀಕ್ಷಿಸುವ ಎಲ್ಲಾ ಅಂಶಗಳೂ ಮದಗಜ ಸಿನಿಮಾದಲ್ಲಿದೆ ಎಂದು ಭರವಸೆ ನೀಡುತ್ತಾರೆ.

ಮಾಸ್ ಸಿನಿಮಾ ಆದರು ಪ್ರತೀ ಸಿನಿಮಾದಲ್ಲಿಯೂ ಪ್ರೇಕ್ಷಕರಿಗೆ ಹೊಸ ಅನುಭವವನ್ನು ನೀಡುವುದು ನನ್ನ ಜವಾಬ್ದಾರಿ. ಮದಗಜ ಸಿನಿಮಾದಲ್ಲಿಯೂ ಅದನ್ನು ಪಾಲಿಸಿದ್ದೇನೆ ಎಂದಿದ್ದಾರೆ ಶ್ರೀಮುರುಳಿ. 

ನಿರ್ದೇಶಕ ಮಹೇಶ್ ಕುಮಾರ್ ಮತ್ತು ನಿರ್ಮಾಪಕ ಉಮಾಪತಿ ಇಬ್ಬರಿಗೂ ತಾವು ಯಾವ ಕೆಟಗರಿಯ ಸಿನಿಮಾ ಮಾಡಿದರೆ ಪ್ರೇಕ್ಷಕರಿಗೆ ಇಷ್ತವಾಗುತ್ತದೆ ಎನ್ನುವುದು ಗೊತ್ತು ಎನ್ನುವ ಅವರು ರವಿ ಬಸ್ರೂರು ಅವರ ಸಮ್ಗೀತ ಕುರಿತಾಗಿ ಪ್ರಶಂಸೆ ವ್ಯಕ್ತಪಡಿಸುತ್ತಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT