ಹಿರಿಯ ನಟ ಶಿವರಾಂ ಅವರ ಅಂತಿಮ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್ 
ಸಿನಿಮಾ ಸುದ್ದಿ

ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟ ಶಿವರಾಂ ಅಂತಿಮ ದರ್ಶನ: ಮಧ್ಯಾಹ್ನ ಅಂತ್ಯಕ್ರಿಯೆ

ನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84 ವ) ಅವರ ಪಾರ್ಥಿವ ಶರೀರವನ್ನು ಚಿತ್ರರಂಗದವರು ಮತ್ತು ಸಾರ್ವಜನಿಕ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಭಾನುವಾರ ಬೆಳಗ್ಗೆ 10.30ರವರೆಗೆ ಇಡಲಾಗಿದೆ.

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84 ವ) ಅವರ ಪಾರ್ಥಿವ ಶರೀರವನ್ನು ಚಿತ್ರರಂಗದವರು ಮತ್ತು ಸಾರ್ವಜನಿಕ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಭಾನುವಾರ ಬೆಳಗ್ಗೆ 10.30ರವರೆಗೆ ಇಡಲಾಗಿದೆ. 

ಶಿವರಾಂ(Sandalwood senior actor Shivaram) ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10.30ರವರೆಗೆ ಕಲಾಕ್ಷೇತ್ರದಲ್ಲಿ ಇಟ್ಟು ನಂತರ ತ್ಯಾಗರಾಜನಾಗರದಲ್ಲಿರುವ ಅವರ ನಿವಾಸಕ್ಕೆ ವರ್ಗಾಯಿಸಲಾಗುತ್ತದೆ. ಅಲ್ಲಿ ಪೂಜಾ ವಿಧಿವಿಧಾನವನ್ನು ನೆರವೇರಿಸಿ ಬಳಿಕ ಕುಟುಂಬಸ್ಥರು, ಸಮೀಪದ ಬಂಧುಗಳ ಸಮ್ಮುಖದಲ್ಲಿ ಬನಶಂಕರಿಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಕೆಲ ದಿನಗಳ ಹಿಂದೆ ಮನೆಯಲ್ಲಿ ಪೂಜೆಗೆ ಕುಳಿತುಕೊಳ್ಳಲು ಸಿದ್ಧರಾಗುತ್ತಿದ್ದ ವೇಳೆ ನಟ ಶಿವರಾಂ ಎಡವಿ ಬಿದ್ದು ತಲೆಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋಮಾ ಸ್ಥಿತಿಗೆ ಜಾರಿದ ನಂತರ ಚೇತರಿಕೆ ಕಾಣಲೇ ಇಲ್ಲ. ಅದಕ್ಕೂ ಕೆಲ ದಿನಗಳ ಹಿಂದೆ ಅವರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತವಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

SCROLL FOR NEXT