ಧ್ರುವ ಸರ್ಜಾ 
ಸಿನಿಮಾ ಸುದ್ದಿ

ಮಾರ್ಟಿನ್ ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿಲ್ಲ: ಧ್ರುವ ಸರ್ಜಾ

ಎಪಿ ಅರ್ಜುನ್  ನಿರ್ದೇಶನದ ಮಾರ್ಟಿನ್ ಸಿನಿಮಾ ಶೂಟಿಂಗ್ ಕಡೆ ನಟ ಧ್ರುವ ಸರ್ಜಾ  ಗಮನ ಹರಿಸುತ್ತಿದ್ದಾರೆ. ಉದಯ್ ಕೆ ಮೆಹ್ತಾ ನಿರ್ಮಾಣದ  ಸಿನಿಮಾ ಆಗಸ್ಟ್  ನಲ್ಲಿ ಸೆಟ್ಟೇರಿತ್ತು.

ಎಪಿ ಅರ್ಜುನ್  ನಿರ್ದೇಶನದ ಮಾರ್ಟಿನ್ ಸಿನಿಮಾ ಶೂಟಿಂಗ್ ಕಡೆ ನಟ ಧ್ರುವ ಸರ್ಜಾ  ಗಮನ ಹರಿಸುತ್ತಿದ್ದಾರೆ. ಉದಯ್ ಕೆ ಮೆಹ್ತಾ ನಿರ್ಮಾಣದ  ಸಿನಿಮಾ ಆಗಸ್ಟ್  ನಲ್ಲಿ ಸೆಟ್ಟೇರಿತ್ತು.

ಎಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಸಿನಿಮಾಗೆ ಸತ್ಯ ಹೆಗಡೆ ಛಾಯಾಗ್ರಹಣವಿದೆ, ಈಗಾಗಲೇ ಹಲವು ಭಾಗದ ಶೂಟಿಂಗ್ ಮುಗಿದಿದ್ದು ಇನ್ನು 55 ದಿನಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ.

ಮಾರ್ಟಿನ್ ಸಿನಿಮಾಗಾಗಿ ಧ್ರುವ ಸರ್ಜಾ ಮಾಡುತ್ತಿದ್ದ ದೈಹಿಕ ಕಸರತ್ತಿನ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಮಾರ್ಟಿನ್ ನಲ್ಲಿ ಧ್ರುವ ಸರ್ಜಾ ದ್ವಿಪಾತ್ರದಲ್ಲಿ ನಟಿಸಿದ್ದಾರೆ ಎಂದು ಹಲವರು ಊಹಿಸಿದ್ದರು.  ಆದರೆ ತಾವು ಈ ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ನಿರ್ದೇಶಕರ ಸೂಚನೆ ಮೇರೆಗೆ ನನ್ನ ದೇಹವನ್ನು ಬದಲಿಸಿಕೊಂಡಿದ್ದೇನೆ, ಮುಂದಿನ ವಾರದಲ್ಲಿ ಕೆಲವು  ಭಾಗದ ಶೂಟಿಂಗ್ ನಡೆಯಲಿದೆ,  ನಿರ್ದಿಷ್ಟ ಶೇಪ್ ಗೆ ಬರುವಂತೆ ಡೈರೆಕ್ಟರ್ ತಿಳಿಸಿದ್ದಾರೆಅದಕ್ಕಾಗಿ ನಾನು ರೆಡಿಯಾಗುತ್ತಿದ್ದೇನೆ ಎಂದು ಧ್ರುವ ಹೇಳಿದ್ದಾರೆ.

ಫೆಬ್ರವರಿ ಅಂತ್ಯದವೇಳೆಗೆ ಮಾರ್ಟಿನ್ ಸಿನಿಮಾ ಶೂಟಿಂಗ್ ಪೂರ್ಣಗೊಳ್ಳಲಿದೆ,  ಕೆಲವು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಉಳಿಯಲಿದೆ,  ಅದಾದ ನಂತರ ಪ್ರೇಮ್ ನಿರ್ದೇಶನದ ಮುಂದಿನ ಸಿನಿಮಾ ಶೂಟಿಂಗ್ ಫೆಬ್ರವರಿಯಲ್ಲಿ ಆರಂಭಗೊಳ್ಳಲಿದ್ದು, ಮಾರ್ಚ್ 1 ರಿಂದ ಶೂಟಿಂಗ್ ನಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

ನಿರ್ದೇಶಕ ಎಪಿ ಅರ್ಜುನ್ ಸದ್ಯ ಹೈದರಾಬಾದ್‌ನಲ್ಲಿದ್ದು, ಚಿತ್ರದ ಸಂಗೀತ ಸಂಯೋಜಕ ಮಣಿ ಶರ್ಮಾ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಎರಡು ಹಾಡುಗಳ ಚಿತ್ರೀಕರಣ ಮುಗಿದಿದೆ.

ಎಪಿ ಅರ್ಜುನ್ 10 ವರ್ಷಗಳ ಹಿಂದೆ ಅದ್ದೂರಿ ಸಿನಿಮಾ ನಿರ್ದೇಶಿಸಿದ್ದರು, ಆದಾದ ನಂತರ ಮತ್ತೆ ಮಾರ್ಟಿನ್ ಸಿನಿಮಾ ಮೂಲಕ ಅರ್ಜುನ್ ಮತ್ತು ಧ್ರುವ ಸರ್ಜಾ ಒಂದಾಗಿ ಕೆಲಸ ಮಾಡುತ್ತಿದ್ದಾರೆ,  ಮಾರ್ಟಿನ್ ಆ್ಯಕ್ಷನ್ ಕಮರ್ಷಿಯಲ್ ಸಿನಿಮಾವಾಗಿದ್ದು, ಧ್ರುವ ಸರ್ಜಾ ಪಾತ್ರ ವಿಭಿನ್ನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?