ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ಬಡವ ರಾಸ್ಕಲ್' ಸ್ನೇಹಿತರೇ ನಿರ್ಮಿಸಿದ ಪಕ್ಕಾ ಲೋಕಲ್ ಸಿನಿಮಾ: ಕೊರಿಯರ್ ಬಾಯ್ ನಿಂದ ನಿರ್ದೇಶಕ ಹುದ್ದೆಗೇರಿದ ಶಂಕರ್ ಗುರು

ವಾಸ್ತವಕ್ಕೆ ಹತ್ತಿರವಾಗಿರುವ ಬಡವ ರಾಸ್ಕಲ್ ಸಿನಿಮಾದ ಕಥೆ ಧನಂಜಯ್ ಅವರಿಗೆ ಹೇಳಿ ಮಾಡಿಸಿದಂತಿದೆ. ಕಲಾವಿದರಾದ ರಂಗಾಯಣ ರಘು ಮತ್ತು ತಾರಾ ಅದ್ಭುತ ಅಭಿನಯ ನೀಡಿದ್ದು, ಸಂಗೀತ ನಿರ್ದೇಶನ ಮಾಡಿರುವ ವಾಸುಕಿ ವೈಭವ್ ಮತ್ತು ಸಿನಿಮೆಟೊಗ್ರಾಫರ್ ಪ್ರೀತಾ ಜಯರಾಮ್ ಅವರ ಕೆಲಸವೂ ಸಿನಿಮಾ ಚೆನ್ನಾಗಿ ಮೂಡಿ ಬರಲು ಕಾರಣವಾಗಿದೆ.

ಕೊರಿಯರ್ ಬಾಯ್ ಆಗಿದ್ದ ದಿನಗಳಿಂದ ಮೊದಲಾಗಿ ಸಿನಿಮಾ ನಿರ್ದೇಶಕನ ಕ್ಯಾಪ್ ಧರಿಸುವವರೆಗಿನ ಶಂಕರ್ ಗುರು ಅವರ ಅನುಭವವವೇ ಸಿನಿಮಾ ಕಥೆಯಾಗಲು ಯೋಗ್ಯವಾದುದು. ಬಡವ ರಾಸ್ಕಲ್ ಸಿನಿಮಾ ನಿರ್ದೇಶನ ಮಾಡಿರುವ ಶಂಕರ್ ಗುರು ಅವರು ಸಿನಿಮಾದ ನಾಯಕ ಮತ್ತು ನಿರ್ಮಾಪಕರಾಗಿರುವ ಧನಂಜಯ್ ಅವರನ್ನು ಸ್ಮರಿಸುತ್ತಾರೆ. 

ಬಡವ ರಾಸ್ಕಲ್ ಸಿನಿಮಾ ಮಿಡಲ್ ಕ್ಲಾಸ್ ಕುಟುಂಬ ಮತ್ತು ಅವರ ಮೌಲ್ಯಗಳ ಕುರಿತಾಗಿದೆ ಎನ್ನುತ್ತಾರೆ ಶಂಕರ್ ಗುರು. ಕನ್ನಡ ಮೀಡಿಯಂನಲ್ಲಿ ಓದಿದ್ದ ಶಂಕರ್ ಗುರು ಮುಂದೆ ವಿದ್ಯಾಭ್ಯಾಸ ಮುಂದುವರಿಸುವ ಇಚ್ಛೆ ಉಳ್ಳವರಾಗಿದ್ದರು. ಆದರೆ ಕಾರಣಾಂತರಗಳಿಂದ ಓದು ಮುಂದುವರಿಸಲು ಆಗಿರಲಿಲ್ಲ. 

ಪಾರ್ಟ್ ಟೈಮ್ ಕೆಲಸ ಮತ್ತು ಸಂಜೆ ತರಗತಿಗಳಿಗೆ ಹಾಜರಾಗುತ್ತಿದ್ದ ಶಂಕರ್ ಗುರು ಅವರಿಗೆ ಎಂಥದ್ದೇ ಸಮಸ್ಯೆ ಬಂದರೂ ಅವರ ಸಿನಿಮಾ ಕನಸು ಮಾತ್ರ ನಿಂತಿರಲಿಲ್ಲ. ವಾಸ್ತವಕ್ಕೆ ಹತ್ತಿರವಾಗಿರುವ ಬಡವ ರಾಸ್ಕಲ್ ಸಿನಿಮಾದ ಕಥೆ ಧನಂಜಯ್ ಅವರಿಗೆ ಹೇಳಿ ಮಾಡಿಸಿದಂತಿದೆ ಎನ್ನುವುದು ಅವರ ಅಭಿಪ್ರಾಯ. 

ಕಲಾವಿದರಾದ ರಂಗಾಯಣ ರಘು ಮತ್ತು ತಾರಾ ಅದ್ಭುತ ಅಭಿನಯ ನೀಡಿದ್ದು, ಸಂಗೀತ ನಿರ್ದೇಶನ ಮಾಡಿರುವ ವಾಸುಕಿ ವೈಭವ್ ಮತ್ತು ಸಿನಿಮೆಟೊಗ್ರಾಫರ್ ಪ್ರೀತಾ ಜಯರಾಮ್ ಅವರ ಕೆಲಸವೂ ಸಿನಿಮಾ ಚೆನ್ನಾಗಿ ಮೂಡಿ ಬರಲು ಕಾರಣವಾಗಿದೆ ಎನ್ನುತ್ತಾರೆ ನಿರ್ದೇಶಕ ಶಂಕರ್ ಗುರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT