ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ಬಡವ ರಾಸ್ಕಲ್' ಸ್ನೇಹಿತರೇ ನಿರ್ಮಿಸಿದ ಪಕ್ಕಾ ಲೋಕಲ್ ಸಿನಿಮಾ: ಕೊರಿಯರ್ ಬಾಯ್ ನಿಂದ ನಿರ್ದೇಶಕ ಹುದ್ದೆಗೇರಿದ ಶಂಕರ್ ಗುರು

ವಾಸ್ತವಕ್ಕೆ ಹತ್ತಿರವಾಗಿರುವ ಬಡವ ರಾಸ್ಕಲ್ ಸಿನಿಮಾದ ಕಥೆ ಧನಂಜಯ್ ಅವರಿಗೆ ಹೇಳಿ ಮಾಡಿಸಿದಂತಿದೆ. ಕಲಾವಿದರಾದ ರಂಗಾಯಣ ರಘು ಮತ್ತು ತಾರಾ ಅದ್ಭುತ ಅಭಿನಯ ನೀಡಿದ್ದು, ಸಂಗೀತ ನಿರ್ದೇಶನ ಮಾಡಿರುವ ವಾಸುಕಿ ವೈಭವ್ ಮತ್ತು ಸಿನಿಮೆಟೊಗ್ರಾಫರ್ ಪ್ರೀತಾ ಜಯರಾಮ್ ಅವರ ಕೆಲಸವೂ ಸಿನಿಮಾ ಚೆನ್ನಾಗಿ ಮೂಡಿ ಬರಲು ಕಾರಣವಾಗಿದೆ.

ಕೊರಿಯರ್ ಬಾಯ್ ಆಗಿದ್ದ ದಿನಗಳಿಂದ ಮೊದಲಾಗಿ ಸಿನಿಮಾ ನಿರ್ದೇಶಕನ ಕ್ಯಾಪ್ ಧರಿಸುವವರೆಗಿನ ಶಂಕರ್ ಗುರು ಅವರ ಅನುಭವವವೇ ಸಿನಿಮಾ ಕಥೆಯಾಗಲು ಯೋಗ್ಯವಾದುದು. ಬಡವ ರಾಸ್ಕಲ್ ಸಿನಿಮಾ ನಿರ್ದೇಶನ ಮಾಡಿರುವ ಶಂಕರ್ ಗುರು ಅವರು ಸಿನಿಮಾದ ನಾಯಕ ಮತ್ತು ನಿರ್ಮಾಪಕರಾಗಿರುವ ಧನಂಜಯ್ ಅವರನ್ನು ಸ್ಮರಿಸುತ್ತಾರೆ. 

ಬಡವ ರಾಸ್ಕಲ್ ಸಿನಿಮಾ ಮಿಡಲ್ ಕ್ಲಾಸ್ ಕುಟುಂಬ ಮತ್ತು ಅವರ ಮೌಲ್ಯಗಳ ಕುರಿತಾಗಿದೆ ಎನ್ನುತ್ತಾರೆ ಶಂಕರ್ ಗುರು. ಕನ್ನಡ ಮೀಡಿಯಂನಲ್ಲಿ ಓದಿದ್ದ ಶಂಕರ್ ಗುರು ಮುಂದೆ ವಿದ್ಯಾಭ್ಯಾಸ ಮುಂದುವರಿಸುವ ಇಚ್ಛೆ ಉಳ್ಳವರಾಗಿದ್ದರು. ಆದರೆ ಕಾರಣಾಂತರಗಳಿಂದ ಓದು ಮುಂದುವರಿಸಲು ಆಗಿರಲಿಲ್ಲ. 

ಪಾರ್ಟ್ ಟೈಮ್ ಕೆಲಸ ಮತ್ತು ಸಂಜೆ ತರಗತಿಗಳಿಗೆ ಹಾಜರಾಗುತ್ತಿದ್ದ ಶಂಕರ್ ಗುರು ಅವರಿಗೆ ಎಂಥದ್ದೇ ಸಮಸ್ಯೆ ಬಂದರೂ ಅವರ ಸಿನಿಮಾ ಕನಸು ಮಾತ್ರ ನಿಂತಿರಲಿಲ್ಲ. ವಾಸ್ತವಕ್ಕೆ ಹತ್ತಿರವಾಗಿರುವ ಬಡವ ರಾಸ್ಕಲ್ ಸಿನಿಮಾದ ಕಥೆ ಧನಂಜಯ್ ಅವರಿಗೆ ಹೇಳಿ ಮಾಡಿಸಿದಂತಿದೆ ಎನ್ನುವುದು ಅವರ ಅಭಿಪ್ರಾಯ. 

ಕಲಾವಿದರಾದ ರಂಗಾಯಣ ರಘು ಮತ್ತು ತಾರಾ ಅದ್ಭುತ ಅಭಿನಯ ನೀಡಿದ್ದು, ಸಂಗೀತ ನಿರ್ದೇಶನ ಮಾಡಿರುವ ವಾಸುಕಿ ವೈಭವ್ ಮತ್ತು ಸಿನಿಮೆಟೊಗ್ರಾಫರ್ ಪ್ರೀತಾ ಜಯರಾಮ್ ಅವರ ಕೆಲಸವೂ ಸಿನಿಮಾ ಚೆನ್ನಾಗಿ ಮೂಡಿ ಬರಲು ಕಾರಣವಾಗಿದೆ ಎನ್ನುತ್ತಾರೆ ನಿರ್ದೇಶಕ ಶಂಕರ್ ಗುರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT