ನಿರ್ದೇಶಕ ಎಸ್.ಎಸ್ ರಾಜಮೌಳಿ 
ಸಿನಿಮಾ ಸುದ್ದಿ

ಬೇರೆ ಬೇರೆ ಚಿತ್ರರಂಗದ ಕಲಾವಿದರನ್ನು ಹಾಕಿಕೊಳ್ಳುವುದರಿಂದ ಪ್ಯಾನ್ ಇಂಡಿಯಾ ಸಿನಿಮಾ ಆಗೋದಿಲ್ಲ: RRR ನಿರ್ದೇಶಕ ರಾಜಮೌಳಿ

ಸ್ಟಾರ್ ನಟರು ಜನರನ್ನು ಚಿತ್ರಮಂದಿರಕ್ಕೆ ಕರೆತರುತ್ತಾರೆ, ಆದರೆ ಸಿನಿಮಾ ಹಿಟ್ ಆಗೋದು ಕಥೆಯಿಂದ.

ಹೈದರಾಬಾದ್: ಬಾಹುಬಲಿ ಸಿನಿಮಾ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಚಿತ್ರ ನಿರ್ದೇಶಕ ರಾಜಮೌಳಿ. ಅವರ ಪ್ರಕಾರ ಪ್ಯಾನ್ ಇಂಡಿಯಾ ಸಿನಿಮಾ ಅಂದರೆ ಬೇರೆ ಬೇರೆ ಚಿತ್ರರಂಗದ ನಟರನ್ನು ಸಿನಿಮಾದಲ್ಲಿ ಹಾಕಿಕೊಳ್ಳುವುದಲ್ಲ. ಯಾವುದೇ ಭಾಷೆಯ ಜನರಿಗೆ ಕನೆಕ್ಟ್ ಆಗುವ ಕಥೆಯೇ ಸಿನಿಮಾದ ಜೀವಾಳ ಎನ್ನುವುದು ಅವರ ಅಭಿಪ್ರಾಯ.

ಯಾವುದೇ ದೃಶ್ಯ ತೆರೆ ಮೇಲೆ ಬರುವಾಗ ಅದರ ಸೌಂಡನ್ನು ಆಫ್ ಮಾಡಿದರೆ ಪರಭಾಷೆಯ ಜನರು ಕಥೆಯನ್ನು ಅರ್ಥ ಮಾಡಿಕೊಳ್ಳುವರೇ ಎಂದು ನಾನು ಚಿಂತಿಸುತ್ತೇನೆ. ಸೌಂಡ್ ಆಫ್ ಮಾಡಿದರೂ ಕಥೆ ಅರ್ಥ ಮಾಡಿಕೊಳ್ಲಬಲ್ಲರು ಅಂದರೆ ಮಾತ್ರ ಅದು ಯಶಸ್ವಿ ಪ್ಯಾನ್ ಇಂಡಿಯಾ ಸಿನಿಮಾ.

ಬಾಹುಬಲಿ ಸಿನಿಮಾ ತೆರೆಕಂಡು 5 ವರ್ಷಗಳ ನಂತರ ಅವರ ಹೊಸ ಸಿನಿಮಾ ಆರ್ ಆರ್ ಆರ್ ಬಿಡುಗಡೆಗೆ ಸಿದ್ಧವಾಗಿದೆ. ತೆಲುಗು ಸ್ಟಾರ್ ನಟರಾದ ಜೂನಿಯರ್ ಎನ್ ಟಿ ಆರ್ ಮತ್ತು ರಾಮ್ ಚರಣ್ ತೇಜ ಆ ಸಿನಿಮಾದಲ್ಲಿ ನಟಿಸಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮ ಕಥೆಯನ್ನು ಹೊಂದಿರುವ ಈ ಸಿನಿಮಾ ಈಗಾಗಲೇ ಸದ್ದು ಮಾಡಿದ್ದು, ನಿರೀಕ್ಷೆಯನ್ನು ಹುಟ್ಟು ಹಾಕಿದೆ.

ಸ್ಟಾರ್ ನಟರು ಜನರನ್ನು ಚಿತ್ರಮಂದಿರಕ್ಕೆ ಕರೆತರುತ್ತಾರೆ, ಆದರೆ ಸಿನಿಮಾ ಹಿಟ್ ಆಗೋದು ಕಥೆಯಿಂದ ಎಂದು ರಾಜಮೌಳಿ ಆತ್ಮವಿಶ್ವಾಸದಿಂದ ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ

ಟ್ರೋಫಿ 'ಕಳ್ಳ' ಮೊಹ್ಸಿನ್ ನಖ್ವಿಗೆ ಸಂಕಷ್ಟ? ಏಷ್ಯಾ ಕಪ್ ಟ್ರೋಫಿ ಮರಳಿ ಪಡೆಯಲು ಅಖಾಡಕ್ಕೀಳಿದ BCCI; ಷರತ್ತು ಹಾಕಿದ ನಖ್ವಿ!

Karur stampede: ದುರಂತದ ಬಳಿಕ ಕರೂರಿಗೆ ಭೇಟಿ ನೀಡಲಿಲ್ಲ ಏಕೆಂದರೆ...: ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿ

'ಹೆಲಿಕಾಪ್ಟರ್ ಸಿದ್ದರಾಮಯ್ಯ': ರಸ್ತೆಯಲ್ಲಿ ಹೋದ್ರೆ ಜನರ ಘೇರಾವ್ ಭಯದಿಂದ ವೈಮಾನಿಕ ಸಮೀಕ್ಷೆ ನಡೆಸಿದ್ರಾ? ಬಿಜೆಪಿ

ಪಾಕ್ ಭದ್ರತಾ ಪಡೆ ಪ್ರಧಾನ ಕಚೇರಿ ಹೊರಗೆ ಕಾರ್ ಬಾಂಬ್ ಸ್ಫೋಟ; ಕನಿಷ್ಠ 10 ಮಂದಿ ಸಾವು

SCROLL FOR NEXT