ಶ್ರೇಯಸ್ ಮಂಜು 
ಸಿನಿಮಾ ಸುದ್ದಿ

ಯಶ್ ಸಿನಿಮಾ ಶ್ರೇಯಸ್ ಮಂಜು ಪಾಲು: 'ರಾಣಾ'ಗೆ ನಂದ ಕಿಶೋರ್ ನಿರ್ದೇಶನ!

ಪಡ್ಡೆಹುಲಿ ನಟ ಶ್ರೇಯಸ್ ಮಂಜು ಮೂರನೇ ಸಿನಿಮಾವನ್ನು ನಂದಕಿಶೋರ್ ನಿರ್ದೇಶಿಸಲಿದ್ದಾರೆ.  ರಾಕಿಂಗ್ ಸ್ಟಾರ್‌' ಯಶ್ ಅಭಿನಯದಲ್ಲಿ, ಹರ್ಷ ನಿರ್ದೇಶನದಲ್ಲಿ 'ರಾಣಾ' ಅನ್ನೋ ಸಿನಿಮಾ ಕೆಲ ವರ್ಷಗಳ ಹಿಂದೆ ಘೋಷಣೆ ಆಗಿತ್ತು.

ಪಡ್ಡೆಹುಲಿ ನಟ ಶ್ರೇಯಸ್ ಮಂಜು ಮೂರನೇ ಸಿನಿಮಾವನ್ನು ನಂದಕಿಶೋರ್ ನಿರ್ದೇಶಿಸಲಿದ್ದಾರೆ. ರಾಕಿಂಗ್ ಸ್ಟಾರ್‌' ಯಶ್ ಅಭಿನಯದಲ್ಲಿ, ಹರ್ಷ ನಿರ್ದೇಶನದಲ್ಲಿ 'ರಾಣಾ' ಅನ್ನೋ ಸಿನಿಮಾ ಕೆಲ ವರ್ಷಗಳ ಹಿಂದೆ ಘೋಷಣೆ ಆಗಿತ್ತು.

ಆದರೆ, ಆನಂತರ ಆ ಸಿನಿಮಾ ಟೇಕ್ ಆಫ್ಆಗಲಿಲ್ಲ. ರಾಣ ಆಗಿ ತೆರೆಮೇಲೆ ಯಶ್‌ರನ್ನು ನೋಡಬೇಕು ಎಂದುಕೊಂಡಿದ್ದ ಫ್ಯಾನ್ಸ್ ಆಸೆ ಈಡೇರಲಿಲ್ಲ. ಇದೀಗ ಆ ಸಿನಿಮಾದ ಶೀರ್ಷಿಕೆ ಕೆ. ಮಂಜು ಪುತ್ರ ಶ್ರೇಯಸ್ ಪಾಲಾಗಿದೆ.

ಗುಜ್ಜಾಲ್ ಟಾಕೀಸ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾಗೆ ಶ್ರೇಯಸ್ ಮಂಜು ನಾಯಕರಾಗಿದ್ದಾರೆ. ಇದೀಗ ಶೀರ್ಷಿಕೆ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಜುಲೈ 7 ರಂದು 'ರಾಣಾ' ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. 

ಜುಲೈ 1ರಂದು ಬೆಂಗಳೂರಿನ ಮೋದಿ ಆಸ್ಪತ್ರೆ ಸಮೀಪವಿರುವ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆದಿದೆ. ಈ ಸಮಾರಂಭದಲ್ಲಿ ಕೆ. ಮಂಜು, ನಿರ್ಮಾಪಕ ಪುರುಷೋತ್ತಮ ಗುಜ್ಜಾಲ್, ನಿರ್ದೇಶಕ ನಂದ ಕಿಶೋರ್, ನಾಯಕ ಶ್ರೇಯಸ್ ಹಾಗೂ ನಾಯಕಿ ರೇಷ್ಮಾ ನಾಣಯ್ಯ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನೀಡುತ್ತಿದ್ದು, ಶೇಖರ್‌ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಮಾಡುತ್ತಿದ್ದಾರೆ. ಸಂಭಾಷಣೆಯನ್ನು ಪ್ರಶಾಂತ್ ರಾಜಪ್ಪ ಬರೆಯುತ್ತಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT