ಅದಿತಿ ಪ್ರಭುದೇವ ಮತ್ತು ವಿನಯ್ ರಾಜ್ 
ಸಿನಿಮಾ ಸುದ್ದಿ

'ಅಂದೊಂದಿತ್ತು ಕಾಲ' ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್ ಗೆ ಚಿತ್ರ ನಿರ್ದೇಶಕನ ಪಾತ್ರ!

ವಿನಯ್ ರಾಜ್ ಕುಮಾರ್ ನಟನೆಯ ಕ್ರೀಡಾ ಕತೆಯುಳ್ಳ 10 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ. ಇದೇ ವೇಳೆ ತಮ್ಮ ಮುಂದಿನ ಸಿನಿಮಾಗಳ ಕೆಲಸ ಆರಂಭವಾಗಿದೆ.

ವಿನಯ್ ರಾಜ್ ಕುಮಾರ್ ನಟನೆಯ ಕ್ರೀಡಾ ಕತೆಯುಳ್ಳ 10 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ. ಇದೇ ವೇಳೆ ತಮ್ಮ ಮುಂದಿನ ಸಿನಿಮಾಗಳ ಕೆಲಸ ಆರಂಭವಾಗಿದೆ.

ಕೀರ್ತಿ ನಿರ್ದೇಶನದ ಅಂದೊಂದಿತ್ತು ಕಾಲ ಸಿನಿಮಾ ಶೂಟಿಂಗ್ ಗೆ ಮರಳಿದ್ದಾರೆ. ಭುವನ್ ಸುರೇಶ್ ಪ್ರೊಡಕ್ಷನ್ ನ ಮೊದಲ ಸಿನಿಮಾ ಇದಾಗಿದೆ, ಫೆಬ್ರವರಿಯಲ್ಲಿಯೇ ಸಿನಿಮಾ ಆರಂಭವಾಗಿತ್ತು. ಆದರೆ ಕೊರೋನಾ ಎರಡನೇ ಅಲೆಯಿಂದಾಗಿ ಅರ್ಧಕ್ಕೆ ನಿಂತಿತ್ತು. ಹೀಗಾಗಿ ಜುಲೈ 15 ರಿಂದ ಶೂಟಿಂಗ್ ಆರಂಭಿಸಲಿದ್ದಾರೆ, 

ಶೂಟಿಂಗ್ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾ ಸ್ಟಿಲ್ ರಿಲೀಸ್ ಮಾಡಿದೆ. 1990ರ ದಶಕದ ಕಥೆಯಾಗಿದ್ದು, ವಿನಯ್ ರಾಜಕುಮಾರ್ ಚಿತ್ರ ನಿರ್ದೇಶಕನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ ನಾಯಕಿಯಾಗಿದ್ದಾರೆ, ಅದಿತಿ ಸಂಗೀತ ವಿದ್ಯಾರ್ಥಿ ಪಾತ್ರದಲ್ಲಿ ನಟಿಸಿದ್ದಾರೆ. 

ಗಟ್ಟಿಮೇಳ ಧಾರಾವಾಹಿ ನಟಿ ನಿಶಾ ರವಿಕೃಷ್ಣನ್ ಸಿನಿಮಾದಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಕಡ್ಡಿಪುಡಿ ಚಂದ್ರು ಮತ್ತು ಅರುಣಾ ಬಾಲರಾಜ್ ಕೂಡ ನಟಿಸಿದ್ದಾರೆ. ಬೆಂಗಳೂರಿನಲ್ಲಿ ಶೂಟಿಂಗ್ ಪ್ರಾರಂಭಿಸಿ, ತೀರ್ಥಹಳ್ಳಿ ಮತ್ತು ಊಟಿಗೆ ಹೋಗುತ್ತೇವೆ. ಕೇರಳದಲ್ಲಿ ಚಿತ್ರೀಕರಣ ಮುಗಿಸಲು ಯೋಜಿಸುತ್ತಿದ್ದೇವೆ. ಚಿತ್ರದ ಸಂಗೀತ ಮತ್ತು ಛಾಯಾಗ್ರಹಣವನ್ನು ಕ್ರಮವಾಗಿ ರಾಘವೇಂದ್ರ.ವಿ ಮತ್ತು ಅಭಿಷೇಕ್ ಕಾಸರಗೋಡ್ ನಿರ್ವಹಿಸಿದ್ದಾರೆ.

ಇನ್ನೂ ಸಿನಿಮಾದಲ್ಲಿ ಗಾಯಕ ವಿಜಯ ಪ್ರಕಾಶ್ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರಮುಖ ಪಾತ್ರವೊಂದಿದ್ದು ಅದರಲ್ಲಿ ವಿಜಯ ಪ್ರಕಾಶ್ ಅವರನ್ನು ನಟಿಸುವಂತೆ ಕೋರಿದ್ದೇವೆ, ಸದ್ಯ ವಿಷಯ ಚರ್ಚೆಯ ಹಂತದಲ್ಲಿದೆ. ಅವರು ಒಪ್ಪಿಕೊಂಡರೇ ಬೆಳ್ಳಿ ತೆರೆಯ ಮೇಲೆ ವಿಜಯ್ ಪ್ರಕಾಶ್ ಮೊಟ್ಟ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಕೀರ್ತಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT