ಹೊಸ ದಿಗಂತ ಕನ್ನಡ ಚಿತ್ರ 
ಸಿನಿಮಾ ಸುದ್ದಿ

ಗಡಿಯಾರ ನಿರ್ದೇಶಕರಿಂದ "ಹೊಸದಿಗಂತ" ಸಿನಿಮಾ

"ಗಡಿಯಾರ" ಚಿತ್ರದ ಮೂಲಕ ಚಿತ್ರರಂಗದಲ್ಲಿ ಸದ್ದು ಮಾಡಿದ್ದ ನಿರ್ದೇಶಕ ಪ್ರಬಿಕ್ ಮೊಗವೀರ್ ಈಗ ಹೊಸ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟಿದ್ದಾರೆ.

ಬೆಂಗಳೂರು: "ಗಡಿಯಾರ" ಚಿತ್ರದ ಮೂಲಕ ಚಿತ್ರರಂಗದಲ್ಲಿ ಸದ್ದು ಮಾಡಿದ್ದ ನಿರ್ದೇಶಕ ಪ್ರಬಿಕ್ ಮೊಗವೀರ್ ಈಗ ಹೊಸ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟಿದ್ದಾರೆ.

ಕೊರೊನಾ ಅತಿಯಾದ ಸಂದರ್ಭದಲ್ಲಿ ಬಿಡುಗಡೆಯಾಗಿದ್ದರೂ "ಗಡಿಯಾರ" ಚಿತ್ರ ವಿಭಿನ್ನ ಕಥಾಹಂದರದ ಮೂಲಕ ಗುರುತಿಸಿಕೊಂಡಿತ್ತು. "ಹೊಸದಿಗಂತ" ಸಿನಿಮಾ ಮನುಷ್ಯನ ಮಿದುಳಿನ ಮೇಲೆ ಹೆಣೆಯಲಾದ ಸಿನಿಮಾ. "ಸಮ್ ಥಿಂಗ್ ಅನೇಬಲ್ ಟು ಎಕ್ಸ್‌ಪ್ಲೇನ್’ ಎನ್ನುವ ವಾಕ್ಯ ಹೊಂದಿರುವ "ಪೋಸ್ಟರ್’ ಅನ್ನು  ಕೂಡ ಸಿನಿಮಾ ತಂಡ ಬಿಡುಗಡೆ ಮಾಡಿದೆ.

ಕಥೆ, ಚಿತ್ರಕಥೆ, ನಿರ್ಮಾಣ ಹಾಗೂ ನಿರ್ದೇಶನದ ಜವಾಬ್ದಾರಿ ಪ್ರಬಿಕ್ ಮೊಗವೀರ್ ಅವರದ್ದು.

"ಗಡಿಯಾರಕ್ಕಿಂತ ಈ ಸಿನಿಮಾ ವಿಭಿನ್ನವಾಗಿ ಇರಲಿದೆ. ಸಾಮಾಜಿಕ ಸಂದೇಶ ಇರುವ ಮನರಂಜನೆ ಚಿತ್ರ ಇದಾಗಲಿದೆ. ನಂಬಲು ಅಸಾಧ್ಯವಾದ ತನಿಖಾ ವರದಿಯನ್ನು ಮುಂದಿಡುವುದು ಕಥೆಯ ಮುಖ್ಯ ಉದ್ದೇಶ. ತಾಂತ್ರಿಕ ವರ್ಗದ ಆಯ್ಕೆ ನಡೆಯುತ್ತಿದೆ. ಇದು ಕೂಡ ಬಹು ತಾರಾಗಣದ ಸಿನಿಮಾ. ನಟ. ನಟಿಯರ  ಆಯ್ಕೆ ನಡೆಯುತ್ತಿದೆ" ಎಂದು ನಿರ್ದೇಶಕ ಪ್ರಬಿಕ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT