ಜೇಮ್ಸ್ ಚಿತ್ರ 
ಸಿನಿಮಾ ಸುದ್ದಿ

ಜೇಮ್ಸ್ ಗೆ ಜೊತೆಯಾದ 'ಘಟೋತ್ಕಚ' ಖ್ಯಾತಿಯ ಕೇತನ್ ಕರಾಂಡೆ

ಮಹಾಭಾರತ ಧಾರಾವಾಹಿಯ 'ಘಟೋತ್ಕಚ' ಖ್ಯಾತಿಯ ದೈತ್ಯ ಪ್ರತಿಭೆ ಕೇತನ್ ಕರಾಂಡೆ ಇದೀಗ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರತಂಡ ಸೇರಿಕೊಂಡಿದ್ದಾರೆ.

ಬೆಂಗಳೂರು: ಮಹಾಭಾರತ ಧಾರಾವಾಹಿಯ 'ಘಟೋತ್ಕಚ' ಖ್ಯಾತಿಯ ದೈತ್ಯ ಪ್ರತಿಭೆ ಕೇತನ್ ಕರಾಂಡೆ ಇದೀಗ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರತಂಡ ಸೇರಿಕೊಂಡಿದ್ದಾರೆ.

ನಿರ್ದೇಶತ ಚೇತನ್ ಕುಮಾರ್ ನಿರ್ದೇಶನ ಜೇಮ್ಸ್ ಚಿತ್ರದಲ್ಲಿ ಕೇತನ್ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಜುಲೈ 5ರಿಂದ ಜೇಮ್ಸ್ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಈಗಾಗಲೇ ಕೇತನ್ ಚಿತ್ರತಂಡ ಸೇರಿಕೊಂಡಿದ್ದಾರೆ. ಸಾಹಸ ನಿರ್ದೇಶಕರಾದ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನದ ಅಡಿಯಲ್ಲಿ ಕೇತನ್ ಹಲವು ಸಾಹಸ ದೃಶ್ಯಗಳಲ್ಲಿ ಅಭಿನಯಿಸಿದ್ದಾರೆ. 

ಈಗಾಗಲೇ ಹಿಂದಿ, ಮರಾಠಿ ಮತ್ತು ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಸೂರ್ಯಪುತ್ರ ಕರ್ಣದಲ್ಲಿ ಭೀಮನ ಪಾತ್ರ ಪೋಷಿಸಿದ್ದ ಕೇತನ್, ಮಹಾಭಾರತ ಧಾರಾವಾಹಿಯಲ್ಲಿ ಭೀಮನ ಪುತ್ರ ಘಟೋತ್ಕಚ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಹಿಂದೆ ಇದೇ ಚೇತನ್ ರ ಭರ್ಜರಿ ಚಿತ್ರದಲ್ಲೂ ಕೇತನ್ ಪ್ರಮುಖ ಪಾತ್ರ ನಿಭಾಯಿಸಿದ್ದರು. ಇದೀಗ 2ನೇ ಬಾರಿಗೆ ಈ ಜೋಡಿ ಒಂದಾಗಿದೆ.  

ಇನ್ನು ಜೇಮ್ಸ್ ಚಿತ್ರ ಟಾಕಿ ಭಾಗ ಸೇರಿದಂತೆ ಇನ್ನೂ ಶೇ.30ರಷ್ಟು ಚಿತ್ರೀಕರಣ ಬಾಕಿ ಇದ್ದು, ಫೈಟ್ ಮತ್ತು ಹಾಡಿನ ಚಿತ್ರೀಕರಣಕ್ಕೆ ಯೋಜನೆ ರೂಪಿಸಲಾಗಿದೆ. ಜೇಮ್ಸ್ ಚಿತ್ರದ ಮೂಲಕ ಚೇತನ್ ಮತ್ತು ಪುನೀತ್ ರಾಜ್ ಕುಮಾರ್ ಜೊಡಿ ಮೊದಲಬಾರಿಗೆ ಒಂದಾಗಿದೆ. ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರು ನಿರ್ಮಾಣದ ಹೊಣೆ ಹೊತ್ತಿದ್ದು, ಜೇಮ್ಸ್ ಚಿತ್ರ ಪ್ರಸ್ತುತ ಕನ್ನಡ ಸಿನಿರಂಗದ ಮೋಸ್ಟ್ ಆ್ಯಂಟಿಸಿಪೇಟೆಡ್ ಚಿತ್ರಗಳ ಪಟ್ಟಿಗೆ ಸೇರಿದೆ. ಪುನೀತ್, ಕೇತನ್ ಅಲ್ಲದೇ ಚಿತ್ರದಲ್ಲಿ ಪ್ರಿಯಾ ಆನಂದ್, ತೆಲುಗು ನಟ ಶ್ರೀಕಾಂತ್, ಆದಿತ್ಯಾ ಮೆನನ್, ಅನು ಪ್ರಭಾಕರ್, ರಂಗಾಯಣ ರಘು, ಮತ್ತು ಮುಖೇಶ್ ರಿಷಿ ಪ್ರಮುಖ  ಪಾತ್ರಗಳಲ್ಲಿ ನಟಿಸಿದ್ದಾರೆ. ಇದಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದು, ಜೆ ಸ್ವಾಮಿ ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT