ನಟ ವಿರಾಟ್ 
ಸಿನಿಮಾ ಸುದ್ದಿ

'ಅದ್ಧೂರಿ ಲವರ್' ಚಿತ್ರೀಕರಣ ಆರಂಭಕ್ಕೆ ಬಹು ದಿನಗಳಿಂದ ಕಾಯುತ್ತಿದ್ದೆ: ನಟ ವಿರಾಟ್

ಎ.ಪಿ. ಅರ್ಜುನ್‌ ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಅದ್ಧೂರಿ ಲವರ್ ಚಿತ್ರದ ಚಿತ್ರೀಕರಣ ಇದೇ ಜುಲೈ 21 ರಿಂದ ಪ್ರಾರಂಭವಾಗುತ್ತಿದೆ. 

ಎ.ಪಿ. ಅರ್ಜುನ್‌ ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಅದ್ಧೂರಿ ಲವರ್ ಚಿತ್ರದ ಚಿತ್ರೀಕರಣ ಇದೇ ಜುಲೈ 21 ರಿಂದ ಪ್ರಾರಂಭವಾಗುತ್ತಿದೆ. 

ಕಿಸ್‌' ಚಿತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟು ಭರವಸೆ ಮೂಡಿಸಿರುವ ನಟ ವಿರಾಟ್ ಅವರು ಚಿತ್ರದಲ್ಲಿ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಅದ್ಧೂರಿ ಲವರ್ ವಿರಾಟ್ ಅವರು ನಟಿಸುತ್ತಿರುವ ಎರಡನೇ ಚಿತ್ರವಾಗಿದೆ. 

ಹಲವು ದಿನಗಳಿಂದಲೂ ಚಿತ್ರದ ಚಿತ್ರೀಕರಣ ಪ್ರಾರಂಭಕ್ಕಾಗಿ ಕಾದು ಕುಳಿತಿದ್ದೆ. ಚಿತ್ರದ ಮೂಹೂರ್ತ ನಿಗದಿಯಾಗಾದ ಮೊದಲ ಲಾಕ್ಡೌನ್ ಘೋಷಣೆಯಾಗಿತ್ತು. ಲಾಕ್ಡೌನ್ ಪೂರ್ಣಗೊಂಡು ಇನ್ನೇನು ಚಿತ್ರೀಕರಣ ಆರಂಭ ಮಾಡಬೇಕೆನ್ನುವಷ್ಟರಲ್ಲಿ ಎರಡನೇ ಲಾಕ್ಡೌನ್ ಘೋಷಣೆಯಾಗಿತ್ತು. ಹೀಗಾಗಿ ಚಿತ್ರೀಕರಣ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಚಿತ್ರೀಕರಣ ಆರಂಭಕ್ಕೆ ದಿನಾಂಕ ನಿಗದಿಯಾಗಿದ್ದು, ಬಹಳ ಉತ್ಸುಕನಾಗಿದ್ದೇನೆ. ಮತ್ತೆ ಲಾಕ್ಡೌನ್ ಆಗದಿರಲಿ ಎಂಬ ಪ್ರಾರ್ಥನೆಯೊಂದಿಗೆ ಚಿತ್ರೀಕರಣ ಆರಂಭಿಸುತ್ತಿದ್ದೇವೆಂದು ನಟ ವಿರಾಟ್ ಅವರು ಹೇಳಿದ್ದಾರೆ. 

ಚಿತ್ರೀಕರಣ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ಸಮಯದಲ್ಲಿ ಡ್ಯಾನ್ಸ್ ಹಾಗೂ ಫೈಟಿಂಗ್ ತರಬೇತಿ ಪಡೆದುಕೊಳ್ಳುತ್ತಿದ್ದೇನೆ. ಬಾಡಿ ಬಿಲ್ಡ್ ಮಾಡುತ್ತಿದ್ದೇನೆ. 15 ದಿನಗಳ ಕಾಲ ದಾಂಡೇಲಿಯಲ್ಲಿ ಚಿತ್ರೀಕರಣ ನಡೆಯಲಿದೆ.ನಂತರ ಬೆಂಗಳೂರು, ಊಟಿ, ಕೇರಳದಲ್ಲಿ ನಡೆಯಲಿದೆ ಎಂದು ವಿರಾಟ್ ತಿಳಿಸಿದ್ದಾರೆ. 

ಚಿತ್ರದ ಚಿತ್ರೀಕರಣ ಕನ್ನಡ ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ನಡೆಯಲಿದೆ. ದೊಡ್ಡ ಮೊತ್ತದಲ್ಲಿ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಅದ್ಧೂರಿ ಲವರ್ ಮೂಲಕ ಟಾಲಿವುಡ್'ಗೂ ಪಾದಾರ್ಪಣೆ ಮಾಡುತ್ತಿರುವುದು ಬಹಳ ಸಂತಸ ತಂದಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT