ರಿಚರ್ಡ್ ಆಂಟನಿ 
ಸಿನಿಮಾ ಸುದ್ದಿ

'ಮೊದಲು ನಮ್ಮ ಕೆಲಸ ಮಾತಾಡಲಿ, ಉಳಿದವೆಲ್ಲ ತದನಂತರ. 'ರಿಚರ್ಡ್ ಆಂಟನಿ' ಮೂಲಕ ರಕ್ಷಿತ್ ಶೆಟ್ಟಿ ಉತ್ತರ!

ಇತ್ತೀಚೆಗೆ ಖಾಸಗಿ ಸುದ್ದಿ ವಾಹಿನಿಯೊಂದರ ವಿರುದ್ಧ ಅಸಮಾಧಾನ, ಆಕ್ರೋಶ ಹೊರಹಾಕಿದ್ದ ನಟ ರಕ್ಷಿತ್ ಶೆಟ್ಟಿ ಜುಲೈ 11ಕ್ಕೆ ಉತ್ತರ ಕೊಡುತ್ತೇನೆ ಎಂದಿದ್ದರು. ಅದಕ್ಕೀಗ ಇಂದು ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಖಾಸಗಿ ಸುದ್ದಿ ವಾಹಿನಿಯೊಂದರ ವಿರುದ್ಧ ಅಸಮಾಧಾನ, ಆಕ್ರೋಶ ಹೊರಹಾಕಿದ್ದ ನಟ ರಕ್ಷಿತ್ ಶೆಟ್ಟಿ ಜುಲೈ 11ಕ್ಕೆ ಉತ್ತರ ಕೊಡುತ್ತೇನೆ ಎಂದಿದ್ದರು. ಅದಕ್ಕೀಗ ಇಂದು ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ನಡಿ ರಿಚರ್ಡ್ ಆಂಟನಿ ಸಿನೆಮಾ ಮಾಡುತ್ತಿದ್ದು ಅದರಲ್ಲಿ ಬರೀ ನಟನೆ ಮಾತ್ರವಲ್ಲದೆ ಸ್ವತಃ ನಿರ್ದೇಶನ ಕೂಡ ಮಾಡುತ್ತಿದ್ದಾರೆ. 'ಉಳಿದವರು ಕಂಡಂತೆ' ಚಿತ್ರದ ಕಥೆಯನ್ನು 'ರಿಚರ್ಡ್ ಆಂಟನಿ' ಮೂಲಕ ಮುಂದುವರಿಸಲಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹೊಂಬಾಳೆ ಫಿಲ್ಮ್ಸ್‌ 9ನೇ ಸಿನಿಮಾ 'ದ್ವಿತ್ವ'ವನ್ನು ಘೋಷಿಸಿತ್ತು. ಪುನೀತ್ ರಾಜ್‌ಕುಮಾರ್ ನಾಯಕನಾಗಿ ಪವನ್‌ ಕುಮಾರ್ ನಿರ್ದೇಶನದ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಇದೀಗ ಸಂಸ್ಥೆಯ 10ನೇ ಸಿನೆಮಾವಾಗಿ ವಿಜಯ್ ಕಿರಗಂದೂರು ಅವರು ರಕ್ಷಿತ್ ಶೆಟ್ಟಿ ಜೊತೆ ಕೈ ಜೋಡಿಸಿದ್ದಾರೆ. 'ಉಳಿದವರು ಕಂಡಂತೆ' ಚಿತ್ರದ 'ರಿಚ್ಚಿ' ಪಾತ್ರದ ಮುಂದುವರಿದ ಭಾಗವೇ 'ರಿಚರ್ಡ್ ಆಂಟನಿ' ಎನ್ನಲಾಗಿದೆ.

ಇಂದು ಸೋಷಿಯಲ್ ಮೀಡಿಯಾ ಮೂಲಕ ಖುಷಿಯ ವಿಚಾರವನ್ನು ಹಂಚಿಕೊಂಡಿರುವ ರಕ್ಷಿತ್ ಶೆಟ್ಟಿಯವರು, 'ಮೊದಲು ನಮ್ಮ ಕೆಲಸ ಮಾತಾಡಲಿ, ಉಳಿದವೆಲ್ಲ ತದನಂತರ... 'ರಿಚರ್ಡ್ ಆಂಟನಿ'- ಮುಂದಿನ ಅಲೆ.. ನಿಮ್ಮ ಹೃದಯದ ದಡದಲ್ಲಿ ಜಾಗವಿರಿಸಿ.. ಸದಾ ನಿಮ್ಮ ಪ್ರೀತಿಯ ಆಶೀರ್ವಾದವಿರಲಿ' ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT