ರಿಚರ್ಡ್ ಆಂಟನಿ 
ಸಿನಿಮಾ ಸುದ್ದಿ

'ಮೊದಲು ನಮ್ಮ ಕೆಲಸ ಮಾತಾಡಲಿ, ಉಳಿದವೆಲ್ಲ ತದನಂತರ. 'ರಿಚರ್ಡ್ ಆಂಟನಿ' ಮೂಲಕ ರಕ್ಷಿತ್ ಶೆಟ್ಟಿ ಉತ್ತರ!

ಇತ್ತೀಚೆಗೆ ಖಾಸಗಿ ಸುದ್ದಿ ವಾಹಿನಿಯೊಂದರ ವಿರುದ್ಧ ಅಸಮಾಧಾನ, ಆಕ್ರೋಶ ಹೊರಹಾಕಿದ್ದ ನಟ ರಕ್ಷಿತ್ ಶೆಟ್ಟಿ ಜುಲೈ 11ಕ್ಕೆ ಉತ್ತರ ಕೊಡುತ್ತೇನೆ ಎಂದಿದ್ದರು. ಅದಕ್ಕೀಗ ಇಂದು ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಖಾಸಗಿ ಸುದ್ದಿ ವಾಹಿನಿಯೊಂದರ ವಿರುದ್ಧ ಅಸಮಾಧಾನ, ಆಕ್ರೋಶ ಹೊರಹಾಕಿದ್ದ ನಟ ರಕ್ಷಿತ್ ಶೆಟ್ಟಿ ಜುಲೈ 11ಕ್ಕೆ ಉತ್ತರ ಕೊಡುತ್ತೇನೆ ಎಂದಿದ್ದರು. ಅದಕ್ಕೀಗ ಇಂದು ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ನಡಿ ರಿಚರ್ಡ್ ಆಂಟನಿ ಸಿನೆಮಾ ಮಾಡುತ್ತಿದ್ದು ಅದರಲ್ಲಿ ಬರೀ ನಟನೆ ಮಾತ್ರವಲ್ಲದೆ ಸ್ವತಃ ನಿರ್ದೇಶನ ಕೂಡ ಮಾಡುತ್ತಿದ್ದಾರೆ. 'ಉಳಿದವರು ಕಂಡಂತೆ' ಚಿತ್ರದ ಕಥೆಯನ್ನು 'ರಿಚರ್ಡ್ ಆಂಟನಿ' ಮೂಲಕ ಮುಂದುವರಿಸಲಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹೊಂಬಾಳೆ ಫಿಲ್ಮ್ಸ್‌ 9ನೇ ಸಿನಿಮಾ 'ದ್ವಿತ್ವ'ವನ್ನು ಘೋಷಿಸಿತ್ತು. ಪುನೀತ್ ರಾಜ್‌ಕುಮಾರ್ ನಾಯಕನಾಗಿ ಪವನ್‌ ಕುಮಾರ್ ನಿರ್ದೇಶನದ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಇದೀಗ ಸಂಸ್ಥೆಯ 10ನೇ ಸಿನೆಮಾವಾಗಿ ವಿಜಯ್ ಕಿರಗಂದೂರು ಅವರು ರಕ್ಷಿತ್ ಶೆಟ್ಟಿ ಜೊತೆ ಕೈ ಜೋಡಿಸಿದ್ದಾರೆ. 'ಉಳಿದವರು ಕಂಡಂತೆ' ಚಿತ್ರದ 'ರಿಚ್ಚಿ' ಪಾತ್ರದ ಮುಂದುವರಿದ ಭಾಗವೇ 'ರಿಚರ್ಡ್ ಆಂಟನಿ' ಎನ್ನಲಾಗಿದೆ.

ಇಂದು ಸೋಷಿಯಲ್ ಮೀಡಿಯಾ ಮೂಲಕ ಖುಷಿಯ ವಿಚಾರವನ್ನು ಹಂಚಿಕೊಂಡಿರುವ ರಕ್ಷಿತ್ ಶೆಟ್ಟಿಯವರು, 'ಮೊದಲು ನಮ್ಮ ಕೆಲಸ ಮಾತಾಡಲಿ, ಉಳಿದವೆಲ್ಲ ತದನಂತರ... 'ರಿಚರ್ಡ್ ಆಂಟನಿ'- ಮುಂದಿನ ಅಲೆ.. ನಿಮ್ಮ ಹೃದಯದ ದಡದಲ್ಲಿ ಜಾಗವಿರಿಸಿ.. ಸದಾ ನಿಮ್ಮ ಪ್ರೀತಿಯ ಆಶೀರ್ವಾದವಿರಲಿ' ಎಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!