ಸೂಪರ್ ಸ್ಟಾರ್ ರಜನಿಕಾಂತ್ 
ಸಿನಿಮಾ ಸುದ್ದಿ

ಇದೇ ಅಂತಿಮ ನಿರ್ಧಾರ, ಮತ್ತೆಂದು ರಾಜಕೀಯಕ್ಕೆ ಬರುವುದಿಲ್ಲ: ರಜನಿಕಾಂತ್ ಸ್ಪಷ್ಟನೆ

ರಾಜಕೀಯಕ್ಕೆ ಮತ್ತೆ ಪ್ರವೇಶದ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿಸಿದ ಕೇವಲ ಒಂದು ಗಂಟೆಯೊಳಗೆ ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ ಎಂದು ಪ್ರತಿಪಾದಿಸುವ ಮೂಲಕ ಸೂಪರ್ ಸ್ಟಾರ್ ರಜನಿಕಾಂತ್, ಸಾವಿರಾರು ಅಭಿಮಾನಿಗಳ ನಿರೀಕ್ಷೆಯನ್ನು ಭಗ್ನಗೊಳಿಸಿದ್ದಾರೆ.

ಚೆನ್ನೈ: ರಾಜಕೀಯಕ್ಕೆ ಮತ್ತೆ ಪ್ರವೇಶದ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿಸಿದ ಕೇವಲ ಒಂದು ಗಂಟೆಯೊಳಗೆ ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ ಎಂದು ಪ್ರತಿಪಾದಿಸುವ ಮೂಲಕ ಸೂಪರ್ ಸ್ಟಾರ್ ರಜನಿಕಾಂತ್, ಸಾವಿರಾರು ಅಭಿಮಾನಿಗಳ ನಿರೀಕ್ಷೆಯನ್ನು ಭಗ್ನಗೊಳಿಸಿದ್ದಾರೆ.

ರಜಿನಿ ಮಕ್ಕಳ್ ಮಂದ್ರಾಮ್ ನ್ನು ವಿಸರ್ಜಿಸಲಾಗುವುದು, ಅದು ರಜನಿಕಾಂತ್ ರಾಸಿಗರ್ ನರ್ಪಾಣಿ ಮಂದ್ರಾಮ್ ಫ್ಯಾನ್ಸ್ ಕ್ಲಬ್ ಆಗಿ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ. 

ಆರ್ ಎಂಎಂ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಿದ ನಂತರ ಹೇಳಿಕೆ ನೀಡಿದ ರಜನಿಕಾಂತ್, ವಿವಿಧ ಸಮಸ್ಯೆಗಳಿಂದಾಗಿ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ. ಭವಿಷ್ಯದಲ್ಲೂ ಯಾವುದೇ ಉದ್ದೇಶ ಇಟ್ಟುಕೊಂಡು ರಾಜಕೀಯಕ್ಕೆ ಬರವುದಿಲ್ಲ, ಆರ್ ಎಂಎಂನ್ನು ವಿಸರ್ಜಿಸಲಾಗುವುದು, ಅದು ರಜನಿಕಾಂತ್ ರಾಸಿಗರ್ ನರ್ಪಾಣಿ ಮಂದ್ರಮ್ ಫ್ಯಾನ್ಸ್ ಕ್ಲಬ್ ಆಗಿ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು. 

ಕಳೆದ ವರ್ಷ ಡಿಸೆಂಬರ್ ನಲ್ಲಿ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ ನಂತರ ಮಂದ್ರಮ್ ಸ್ಥಿತಿ ಮತ್ತು ಅದರ ಕರ್ತವ್ಯಗಳ ಬಗ್ಗೆ ಪದಾಧಿಕಾರಿಗಳು ಹಾಗೂ ಅಭಿಮಾನಿಗಳಲ್ಲಿ ಪ್ರಶ್ನೆ ಎದ್ದಿತ್ತು. ಈ ಸಮಸ್ಯೆಯನ್ನು ಬಗೆಹರಿಸುವುದು ನನ್ನ ಕರ್ತವ್ಯ ಎಂದರು.

ಕಳೆದ ವರ್ಷ ಡಿಸೆಂಬರ್ 29 ರಂದು ರಾಜಕೀಯಕ್ಕೆ ಬರುವುದಿಲ್ಲ ಎಂದು ರಜನಿಕಾಂತ್ ಘೋಷಣೆ ಮಾಡಿದ್ದರು. ನಾನು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಲೀ ಅಥವಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಅವರು ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT