ಸೂಪರ್ ಸ್ಟಾರ್ ರಜನಿಕಾಂತ್ 
ಸಿನಿಮಾ ಸುದ್ದಿ

ಇದೇ ಅಂತಿಮ ನಿರ್ಧಾರ, ಮತ್ತೆಂದು ರಾಜಕೀಯಕ್ಕೆ ಬರುವುದಿಲ್ಲ: ರಜನಿಕಾಂತ್ ಸ್ಪಷ್ಟನೆ

ರಾಜಕೀಯಕ್ಕೆ ಮತ್ತೆ ಪ್ರವೇಶದ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿಸಿದ ಕೇವಲ ಒಂದು ಗಂಟೆಯೊಳಗೆ ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ ಎಂದು ಪ್ರತಿಪಾದಿಸುವ ಮೂಲಕ ಸೂಪರ್ ಸ್ಟಾರ್ ರಜನಿಕಾಂತ್, ಸಾವಿರಾರು ಅಭಿಮಾನಿಗಳ ನಿರೀಕ್ಷೆಯನ್ನು ಭಗ್ನಗೊಳಿಸಿದ್ದಾರೆ.

ಚೆನ್ನೈ: ರಾಜಕೀಯಕ್ಕೆ ಮತ್ತೆ ಪ್ರವೇಶದ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿಸಿದ ಕೇವಲ ಒಂದು ಗಂಟೆಯೊಳಗೆ ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ ಎಂದು ಪ್ರತಿಪಾದಿಸುವ ಮೂಲಕ ಸೂಪರ್ ಸ್ಟಾರ್ ರಜನಿಕಾಂತ್, ಸಾವಿರಾರು ಅಭಿಮಾನಿಗಳ ನಿರೀಕ್ಷೆಯನ್ನು ಭಗ್ನಗೊಳಿಸಿದ್ದಾರೆ.

ರಜಿನಿ ಮಕ್ಕಳ್ ಮಂದ್ರಾಮ್ ನ್ನು ವಿಸರ್ಜಿಸಲಾಗುವುದು, ಅದು ರಜನಿಕಾಂತ್ ರಾಸಿಗರ್ ನರ್ಪಾಣಿ ಮಂದ್ರಾಮ್ ಫ್ಯಾನ್ಸ್ ಕ್ಲಬ್ ಆಗಿ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ. 

ಆರ್ ಎಂಎಂ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಿದ ನಂತರ ಹೇಳಿಕೆ ನೀಡಿದ ರಜನಿಕಾಂತ್, ವಿವಿಧ ಸಮಸ್ಯೆಗಳಿಂದಾಗಿ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ. ಭವಿಷ್ಯದಲ್ಲೂ ಯಾವುದೇ ಉದ್ದೇಶ ಇಟ್ಟುಕೊಂಡು ರಾಜಕೀಯಕ್ಕೆ ಬರವುದಿಲ್ಲ, ಆರ್ ಎಂಎಂನ್ನು ವಿಸರ್ಜಿಸಲಾಗುವುದು, ಅದು ರಜನಿಕಾಂತ್ ರಾಸಿಗರ್ ನರ್ಪಾಣಿ ಮಂದ್ರಮ್ ಫ್ಯಾನ್ಸ್ ಕ್ಲಬ್ ಆಗಿ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು. 

ಕಳೆದ ವರ್ಷ ಡಿಸೆಂಬರ್ ನಲ್ಲಿ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ ನಂತರ ಮಂದ್ರಮ್ ಸ್ಥಿತಿ ಮತ್ತು ಅದರ ಕರ್ತವ್ಯಗಳ ಬಗ್ಗೆ ಪದಾಧಿಕಾರಿಗಳು ಹಾಗೂ ಅಭಿಮಾನಿಗಳಲ್ಲಿ ಪ್ರಶ್ನೆ ಎದ್ದಿತ್ತು. ಈ ಸಮಸ್ಯೆಯನ್ನು ಬಗೆಹರಿಸುವುದು ನನ್ನ ಕರ್ತವ್ಯ ಎಂದರು.

ಕಳೆದ ವರ್ಷ ಡಿಸೆಂಬರ್ 29 ರಂದು ರಾಜಕೀಯಕ್ಕೆ ಬರುವುದಿಲ್ಲ ಎಂದು ರಜನಿಕಾಂತ್ ಘೋಷಣೆ ಮಾಡಿದ್ದರು. ನಾನು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಲೀ ಅಥವಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಅವರು ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?