ನಟ ದರ್ಶನ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಹೊಟೇಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಆರೋಪ: 'ಸಂದೇಶ್ ಪ್ರಿನ್ಸ್' ಗೆ ಪೊಲೀಸರ ಆಗಮನ, ಪರಿಶೀಲನೆ 

ಸ್ಯಾಂಡಲ್ ವುಡ್ ನಟ ದರ್ಶನ್ ಮೈಸೂರಿನ ಸಂದೇಶ ಪ್ರಿನ್ಸ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು ಎಂಬ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಲು ಶುಕ್ರವಾರ ಬೆಳಗ್ಗೆ ಪೊಲೀಸರು ಆಗಮಿಸಿದ್ದಾರೆ.

ಮೈಸೂರು: ಸ್ಯಾಂಡಲ್ ವುಡ್ ನಟ ದರ್ಶನ್ ಮೈಸೂರಿನ ಸಂದೇಶ ಪ್ರಿನ್ಸ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು ಎಂಬ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಲು ಶುಕ್ರವಾರ ಬೆಳಗ್ಗೆ ಪೊಲೀಸರು ಆಗಮಿಸಿದ್ದಾರೆ.

ದೇವರಾಜ ಉಪ ವಿಭಾಗದ ಎಸಿಪಿ ಶಶಿಧರ್ ನೇತೃತ್ವದಲ್ಲಿ ಪೊಲೀಸರು ಅಲ್ಲಿನ ಸ್ಥಳಗಳನ್ನು ಪರಿಶೀಲಿಸುತ್ತಿದ್ದಾರೆ. ಅಂದು ದರ್ಶನ್ ಮತ್ತು ಅವರ ಸ್ನೇಹಿತರು ಪಾರ್ಟಿ ನಡೆಸಿದ ಕೋಣೆ, ಅಲ್ಲಿ ಸರ್ವ್ ಮಾಡುತ್ತಿದ್ದ ಸಿಬ್ಬಂದಿಗಳ ಬಗ್ಗೆ, ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆ ಹೊಟೇಲ್ ಮಾಲೀಕ ಸಂದೇಶ್ ನಾಗರಾಜ್ ಅವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ನಜರ್ ಬಾದ್ ಠಾಣೆಯ ಇನ್ಸ್ ಪೆಕ್ಟರ್ ಶ್ರೀಕಾಂತ್ ಕೂಡ ತಂಡದಲ್ಲಿದ್ದಾರೆ.

ಸದ್ಯ ಈಗ ಹೊಟೇಲ್ ನಲ್ಲಿ ಸಂದೇಶ್ ಇದ್ದಾರೆ. ನಿನ್ನೆ ಸಾಯಂಕಾಲ ಬೆಂಗಳೂರಿನಿಂದ ಆಗಮಿಸಿದ್ದ ನಟ ದರ್ಶನ್ ಹೊಟೇಲ್ ಗೆ ಆಗಮಿಸಿ ಸಂದೇಶ್ ಅವರಲ್ಲಿ ಮಾತುಕತೆ ನಡೆಸಿ ತಮ್ಮ ತೂಗುದೀಪ ಫಾರ್ಮ್ ಹೌಸ್ ಗೆ ತೆರಳಿದ್ದರು. ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿರುವ ಗಂಗಾಧರ್ ಅವರನ್ನು ಸಹ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

ಸದ್ಯ ಈಗ ನಟ ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲಿಯೇ ಇದ್ದಾರೆ. ಕೋವಿಡ್-19 ನಿರ್ಬಂಧ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅವರಿಗೆ ಸಹ ಇಂದು ದರ್ಶನ ಸಿಗಲಿಲ್ಲ. ಇಂದು ಮಧ್ಯಾಹ್ನ ನಂತರ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆಯೇ ಎಂಬ ಕುತೂಹಲ ಕೆರಳಿದೆ.

ಗೃಹ ಸಚಿವರಿಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿನ್ನೆ ಮನವಿ ಮಾಡಿದ ಹಿನ್ನೆಲೆ ಗೃಹ ಸಚಿವರು ವಿಷಯ ಬಗ್ಗೆ ತನಿಖೆ ನಡೆಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದರು. ಹೀಗಾಗಿ ಹೋಟೆಲ್‌ಗೆ ಅಧಿಕಾರಿಗಳು ಭೇಟಿ ನೀಡಿ, ಸಂದೇಶ್​ ದ್​ ಪ್ರಿನ್ಸ್‌ ಹೋಟೆಲ್ ಮಾಲೀಕ ಸಂದೇಶ್, ಹೋಟೆಲ್ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. 

ಗಂಗಾಧರ್ ಹೇಳಿಕೆ ದಾಖಲು: ಅಂದು ದರ್ಶನ್ ಅವರು ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಗಂಗಾಧರ್ ಅವರ ಹೇಳಿಕೆಯನ್ನು ಈಗ ಪೊಲೀಸರು ದಾಖಲಿಸಿಕೊಳ್ಳುತ್ತಿದ್ದಾರೆ. ಅದರ ಸಂಪೂರ್ಣ ವಿಡಿಯೊ ಚಿತ್ರೀಕರಣವಾಗುತ್ತಿದೆ.  ಇಂದ್ರಜಿತ್ ಲಂಕೇಶ್ ಅವರು ಗಂಗಾಧರ್ ಎಂಬ ಕೆಲಸಗಾರನ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿದ್ದರು. ಗಂಗಾಧರ್ ಅವರು ಇಂದು ಯಾವ ರೀತಿ ಹೇಳಿಕೆ ನೀಡುತ್ತಾರೆ ಎಂಬ ಆಧಾರದಲ್ಲಿ ಕೇಸಿಗೆ ಮುಂದಿನ ತಿರುವು ಪಡೆದುಕೊಳ್ಳಬಹುದು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT