ಆರ್ ಆರ್ ಆರ್ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಕೆಜಿಎಫ್-2 ಬಳಿಕ ದಾಖಲೆ ಮೊತ್ತಕ್ಕೆ ಆರ್‌ಆರ್‌ಆರ್ ಆಡಿಯೋ ಹಕ್ಕು ಖರೀದಿಸಿದ ಟಿ ಸಿರೀಸ್ ಲಹರಿ ಸಂಸ್ಥೆ

ಟಾಲಿವುಡ್ ಸಕ್ಸಸ್ ಫುಲ್ ನಿರ್ದೇಶಕರೆಂದೇ ಖ್ಯಾತಿ ಪಡೆದಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಆರ್‌ಆರ್‌ಆರ್ ಚಿತ್ರದ ಆಡಿಯೋ ಹಕ್ಕನ್ನು ಟಿ ಸೀರಿಸ್ ಮತ್ತು ಲಹರಿ ಸಂಸ್ಥೆಗಳು ಜಂಟಿಯಾಗಿ ಖರೀದಿಸಿವೆ.  

ಹೈದರಾಬಾದ್: ಟಾಲಿವುಡ್ ಸಕ್ಸಸ್ ಫುಲ್ ನಿರ್ದೇಶಕರೆಂದೇ ಖ್ಯಾತಿ ಪಡೆದಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಆರ್‌ಆರ್‌ಆರ್ ಚಿತ್ರದ ಆಡಿಯೋ ಹಕ್ಕನ್ನು ಟಿ ಸೀರಿಸ್ ಮತ್ತು ಲಹರಿ ಸಂಸ್ಥೆಗಳು ಜಂಟಿಯಾಗಿ ಖರೀದಿಸಿವೆ.  

ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ‘ಆರ್‌ಆರ್‌ಆರ್‌’ (ರೈಸ್‌-ರೋರ್‌-ರಿವೋಲ್ಟ್‌) ಸಿನಿಮಾದ ಆಡಿಯೊ ಹಕ್ಕುಗಳನ್ನು ಟಿ-ಸೀರಿಸ್‌ ಹಾಗೂ ಲಹರಿ ಮ್ಯೂಸಿಕ್‌ ಸಂಸ್ಥೆಗಳು ದಾಖಲೆಯ ಮೊತ್ತಕ್ಕೆ ಖರೀದಿ ಮಾಡಿವೆ. ಟಿ-ಸೀರಿಸ್‌ ಸಂಸ್ಥೆ ಅಧಿಕೃತವಾಗಿ ಟ್ವೀಟ್‌ ಮಾಡಿ ಆಡಿಯೊ ಹಕ್ಕುಗಳನ್ನು  ಖರೀದಿಸಿರುವ ಮಾಹಿತಿಯನ್ನು ಹಂಚಿಕೊಂಡಿದೆ. ಆಡಿಯೊ ಹಕ್ಕು ಖರೀದಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆಯಾದರೂ ಅಧಿಕೃತ ಮೊತ್ತವನ್ನು ಬಹಿರಂಗಪಡಿಸಿಲ್ಲ.

ಮೂಲಗಳ ಪ್ರಕಾರ ಈ ಸಿನಿಮಾದ ಆಡಿಯೊ ಹಕ್ಕುಗಳನ್ನು 25 ಕೋಟಿ ರೂಗೆ ಖರೀದಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಹಿಂದೆ ಕೆ.ಜಿ.ಎಫ್-2 ಸಿನಿಮಾದ ಆಡಿಯೊ ಹಕ್ಕು 7.20 ಕೋಟಿ ರೂಗೆ ಮಾರಾಟವಾಗಿತ್ತು. 

ಪಂಚ ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಈ ಸಿನಿಮಾವನ್ನು ಸುಮಾರು 400 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಎಂ.ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಸಂಸ್ಥೆಯು ನಿರ್ಮಿಸುತ್ತಿರುವ ಈ ಚಿತ್ರವು 20ನೇ ಶತಮಾನದ ಆರಂಭದಲ್ಲಿ ಇಬ್ಬರು  ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕುಮರಾಂ ಭೀಮ್‌ ಅವರ ಜೀವನವನ್ನು ಆಧರಿಸಿದ ಕಥೆ. ಈ ಚಿತ್ರದಲ್ಲಿ ಚರಣ್ ರಾಮರಾಜು ಪಾತ್ರದಲ್ಲಿ, ಎನ್‌ಟಿಆರ್ ಜೂನಿಯರ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟರಾದ ಅಜಯ್ ದೇವ್‌ಗನ್ ಮತ್ತು ಆಲಿಯಾ ಭಟ್  ಪ್ರಮುಖ ಪಾತ್ರಗಳಲ್ಲಿದ್ದಾರೆ.

ಈ ಸಿನಿಮಾವನ್ನು ಬರುವ ಅಕ್ಟೋಬರ್‌ ತಿಂಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Ballari banner row: ಯಾರ ಗನ್ ನಿಂದ ಗುಂಡು ಹಾರಿತ್ತು ಎಂದು ತನಿಖೆ ಮಾಡಲು ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'..: BJP ನಾಯಕ ಟೆಮ್ಜೆನ್

'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್‌ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Zಗಳು, ಗುಂಡೇಟಿಗೆ 7 ಮಂದಿ ಬಲಿ!

ಮಣಿಪುರ: 27 ಕಚ್ಚಾ ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸಿದ ಪೊಲೀಸರು

SCROLL FOR NEXT