ಉಪೇಂದ್ರ 
ಸಿನಿಮಾ ಸುದ್ದಿ

ಉಪೇಂದ್ರ ಮುಂದಿನ ಸಿನಿಮಾಗೆ 'ರಾಜಾಹುಲಿ' ನಿರ್ದೇಶಕ ಗುರು ದೇಶಪಾಂಡೆ ಆ್ಯಕ್ಷನ್ ಕಟ್!

ನಟ ಉಪೇಂದ್ರ ಕೋವಿಡ್ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ, ಇದೇ ವೇಳೆ ಗಾಂಧಿ ನಗರದಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.

ನಟ ಉಪೇಂದ್ರ ಕೋವಿಡ್ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ, ಇದೇ ವೇಳೆ ಗಾಂಧಿ ನಗರದಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.

ಉಪೇಂದ್ರ ಅವರ ಮುಂದಿನ ಕಮರ್ಷಿಯಲ್ ಸಿನಿಮಾವನ್ನು ರಾಜಾಹುಲಿ ನಿರ್ದೇಶಕ ಗುರು ದೇಶಪಾಂಡೆ ನಿರ್ದೇಶಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಉಪೇಂದ್ರ ಅವರ ಜೊತೆ ಈಗಾಗಲೇ ಮೊದಲ ಸುತ್ತಿನ ಮಾತುಕತೆ ಪೂರ್ಣಗೊಂಡಿದ್ದು ಈ ಪ್ರಾಜೆಕ್ಟ್ ನಿರ್ದೇಶಕರ ಜಿ ಸಿನಿಮಾಸ್ ಬ್ಯಾನರ್ ಅಡಿ ತಯಾರಾಗಲಿದೆ ಎಂದು ಮೂಲಗಳು ತಿಳಿಸಿವೆ.

ಲಾಕ್ ಡೌನ್ ನಂತರ ನಟ ಉಪೇಂದ್ರ ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಲಿದ್ದಾರೆ, ಇದರ ಜೊತೆಗೆ ಬುದ್ದಿವಂತ-2 ಹಾಗೂ ತ್ರಿಶೂಲಂ ಸಿನಿಮಾ ಕಡೆ ಗಮನ ಹರಿಸಲಿದ್ದಾರೆ. ಈ ಎರಡು ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ. 

ಇದೇ ವೇಳೆ ಉಪೇಂದ್ರ ಕೆ.ಮಾದೇಶ ನಿರ್ದೇಶನ ಲಗಾಮ್ ಸಿನಿಮಾದಲ್ಲಿ ಹಾಗೂ ಶಶಾಂಕ್ ನಿರ್ದೇಶನದ ಸಿನಿಮಾದಲ್ಲಿಯೂ ನಟಿಸಲಿದ್ದಾರೆ. ಈಗಾಗಲೇ ಉಪೇಂದ್ರ ತೆಲುಗಿನ ಘಣಿ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಇದರ ಜೊತೆಗೆ ಮಂಜು ಮಾಂಡವ್ಯ ಸಿನಿಮಾಗೂ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದೆಲ್ಲದರ ನಡುವೆಯೇ ಗುರು ದೇಶಪಾಂಡೆ ಸಿನಿಮಾದಲ್ಲಿಯೂ ಉಪ್ಪಿ ನಟಿಸಲಿದ್ದಾರೆ ಎಂಬ ಸುದ್ದಿ  ಹರಿದಾಡುತ್ತಿದೆ.

ಯಶ್ ನಟನೆಯ ರಾಜಾಹುಲಿ ಸಿನಿಮಾ ನಿರ್ದೇಶಿಸಿ ಗುರು ದೇಶಪಾಂಡೆ ಯಶಸ್ಸು ಕಂಡಿದ್ದರು. ಅದಾದ ನಂತರ ರುದ್ರ ತಾಂಡವ, ಸಂಹಾರ ಹಾಗೂ ಪಡ್ಡೆಹುಲಿ ಸಿನಿಮಾಗಳಂತ ವಿಭಿನ್ನ ಕಥೆಯ ಚಿತ್ರ ನಿರ್ದೇಶಿಸಿದ್ದಾರೆ.

ಜಂಟಲ್ ಮ್ಯಾನ್ ಅವರ ನಿರ್ಮಾಣದ ಮೊದಲ ಸಿನಿಮಾವಾಗಿದೆ. ಈಗ, ಉಪೇಂದ್ರ ಅವರೊಂದಿಗಿನ ಈ ಯೋಜನೆಯು ಮತ್ತೊಂದು ದೊಡ್ಡ ಟಿಕೆಟ್ ಚಿತ್ರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT