ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ 
ಸಿನಿಮಾ ಸುದ್ದಿ

'ಭಾರತ ಸಿಂಧೂರಿ' ಹೆಸರಲ್ಲಿ ರೋಹಿಣಿ ಸಿಂಧೂರಿ ಜೀವನ ಚರಿತ್ರೆ ತೆರೆಗೆ? 

ಮಹಿಳಾ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಕರ್ನಾಟಕದಲ್ಲಿ ಜನಪ್ರಿಯ. 2009ರ ಬ್ಯಾಚ್ ನ ಕರ್ನಾಟಕ ಕೆಡರ್ ನ ಐಎಎಸ್ ಅಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಸಮರ್ಥ ಆಡಳಿತದಿಂದ ಮತ್ತು ಅಷ್ಟೇ ವಿವಾದಗಳಿಂದ ಹೆಸರಾಗಿದ್ದಾರೆ.

ಬೆಂಗಳೂರು: ಮಹಿಳಾ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಕರ್ನಾಟಕದಲ್ಲಿ ಜನಪ್ರಿಯ. 2009ರ ಬ್ಯಾಚ್ ನ ಕರ್ನಾಟಕ ಕೆಡರ್ ನ ಐಎಎಸ್ ಅಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಸಮರ್ಥ ಆಡಳಿತದಿಂದ ಮತ್ತು ಅಷ್ಟೇ ವಿವಾದಗಳಿಂದ ಹೆಸರಾಗಿದ್ದಾರೆ.

ಇತ್ತೀಚೆಗೆ ಮೈಸೂರು ಜಿಲ್ಲಾಧಿಕಾರಿಯಾಗಿಯೂ ಕೆಲಸ ಮಾಡಿರುವ ರೋಹಿಣಿ ಸಿಂಧೂರಿಯವರನ್ನು ಸರ್ಕಾರ ನಂತರ ಎದ್ದ ವಿವಾದಗಳಿಂದ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಿದೆ. ಇದೀಗ ಈ ಮಹಿಳಾ ಅಧಿಕಾರಿಯ ಜೀವನ ಚರಿತ್ರೆಯಾಧಾರಿತ ಚಿತ್ರ ಸಿದ್ದವಾಗುತ್ತಿದೆ ಎಂದು ತಿಳಿದುಬಂದಿದೆ.

ಮಂಡ್ಯ ಮೂಲದ ಹಿರಿಯ ಪತ್ರಕರ್ತ ಕೃಷ್ಣ ಸ್ವರ್ಣಸಂದ್ರ ಎಂಬುವವರು 'ಭಾರತ ಸಿಂಧೂರಿ' ಶೀರ್ಷಿಕೆಯಡಿ ಚಿತ್ರ ತಯಾರಿಸುತ್ತಿದ್ದು ಕಳೆದ ವರ್ಷ ಜೂನ್ ನಲ್ಲಿಯೇ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆಯ ರಿಜಿಸ್ಟ್ರೇಷನ್ ಮಾಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ರೋಹಿಣಿ ಸಿಂಧೂರಿ ಅವರ ಪಾತ್ರದಲ್ಲಿ ಕನ್ನಡ ಬಿಗ್ ಬಾಸ್ ನ ಸ್ಪರ್ಧಿ, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ನಟಿಸುತ್ತಿದ್ದಾರೆ ಎಂಬ ಮಾಹಿತಿಯಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT