ಸಿನಿಮಾ ಸುದ್ದಿ

ಪತ್ರಕರ್ತ, ಹಿರಿಯು ಚಲನಚಿತ್ರ ನಟ ಸುರೇಶ್ ಚಂದ್ರ ಕೊರೋನಾದಿಂದ ನಿಧನ

Raghavendra Adiga

ಪತ್ರಕರ್ತ, ಹಿರಿಯ ನಟ ಸುರೇಶ್ ಚಂದ್ರ ಅವರು ಕೊರೋನಾದಿಂದ ನಿಧನರಾಗಿದ್ದಾರೆ. 

ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್ ಚಂದ್ರ ಇಂದು ಅಪೋಲೋ‌ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

ಬೆಂಗಳೂರಿನ ಸುಬ್ರಹ್ಮಣ್ಯ ನಗರದಲ್ಲಿ ನೆಲೆಸಿದ್ದ ಸುರೇಶ್ ಚಂದ್ರ  ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ತುಮಕೂರಿನ ಮಧುಗಿರಿಯ ಲಿಂಗೇನಹಳ್ಳಿಯಲ್ಲಿ ನೆರವೇರಲಿದೆ ಎಂದು ಮೂಲಗಳು ಹೇಳಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಚೆಲುವಿನ ಚಿತ್ತಾರ" ಸಿನಿಮಾದಿಂದ ಪ್ರಸಿದ್ದವಾಗಿದ್ದ ಸುರೇಶ್ ಚಂದ್ರ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಇನ್ನು 80ರ ದಶಕದಿಂದ ಸಿನಿ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಚಂದ್ರ "ಸಂಜೆವಾಣಿ" ಪತ್ರಿಕೆಯಲ್ಲಿದ್ದು ಕಳೆದ ವರ್ಷ ನಿವೃತ್ತರಾಗಿದ್ದರು.

SCROLL FOR NEXT