ಸಂಚಾರಿ ವಿಜಯ್ 
ಸಿನಿಮಾ ಸುದ್ದಿ

ಸಿಎಂ ಸಂತಾಪ: ಆದರೆ ಸಂಚಾರಿ ವಿಜಯ್‌ಗೆ ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರು

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಂತಾಪ ಸೂಚಿಸಿದ್ದು ಇದರ ಬೆನ್ನಲ್ಲೇ ಅಪೋಲೋ ಆಸ್ಪತ್ರೆ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ನಾವು ಘೋಷಿಸಿಲ್ಲ. ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ. 

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಂತಾಪ ಸೂಚಿಸಿದ್ದು ಇದರ ಬೆನ್ನಲ್ಲೇ ಅಪೋಲೋ ಆಸ್ಪತ್ರೆ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ನಾವು ಘೋಷಿಸಿಲ್ಲ. ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ. 

ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಯಡಿಯೂರಪ್ಪನವರು ಸಂಚಾರಿ ವಿಜಯ್ ಅವರಿಗೆ ಸಂತಾಪ ಸೂಚಿಸಿದ್ದರು. ಅಲ್ಲದೆ ಅವರ ಅಗಲಿಕೆಯನ್ನು ಬರಿಸುವ ಶಕ್ತಿ ಅವರು ಕುಟುಂಬಕ್ಕೆ ನೀಡಲಿ ಎಂದು ಹೇಳಿದ್ದರು. 

ಇದರ ಬೆನ್ನಲ್ಲೇ ಆಸ್ಪತ್ರೆಯ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ಆಸ್ಪತ್ರೆ ಅಧಿಕೃತವಾಗಿ ಘೋಷಿಸಿಲ್ಲ. ಅಪಘಾತದಿಂದಾಗಿ ಅವರ ಮೆದುಳು ನಿಷ್ಕ್ರಿಯಗೊಂಡಿರುವುದು ನಿಜ. ಆದರೆ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಅವರ ಇತರ ಅಂಗಗಳು ಕಾರ್ಯನಿರ್ವಹಿಸುತ್ತಿವೆ. ಮೆದುಳು ನಿಷ್ಕ್ರಿಯ ಎಂದಾಕ್ಷಣ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಹೇಳಲು ಆಗಲ್ಲ. ಹೃದಯ ಬಡಿತ ನಿಂತಾಗ ಮಾತ್ರ ಮೃತ ಎಂದು ಹೇಳಬಹುದು ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ಅರುಣ್ ನಾಯ್ಕ್ ತಿಳಿಸಿದ್ದಾರೆ. 

ಇನ್ನು ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿರುವುದರಿಂದ ಅವರ ಅಂಗಾಂಗ ದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. 

ವಿಜಯ್ ಅವರು ಶನಿವಾರ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಅವರ ಬಲಗಾಲು ಮತ್ತು ತಲೆಗೆ ಭೀಕರ ಗಾಯಗಳಾಗಿತ್ತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಅವರ ತಲೆಗೆ ಗಂಭೀರ ಗಾಯವಾಗಿದ್ದನ್ನು ಗಮನಿಸಿದ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದರು. 36 ಗಂಟೆಗಳಿಂದಲೂ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು ಅವರ ಮೆದುಳು ಮಾತ್ರ ಯಾವುದಕ್ಕೂ ಸ್ಪಂಧಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!