ಸಂಚಾರಿ ವಿಜಯ್ 
ಸಿನಿಮಾ ಸುದ್ದಿ

ಸಂಚಾರ ಮುಗಿಸಿದ ವಿಜಯ್: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ, ಸ್ವಗ್ರಾಮ ಪಂಚನಹಳ್ಳಿಯಲ್ಲಿಂದು ಅಂತ್ಯಕ್ರಿಯೆ

ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (37) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ. 

ಬೆಂಗಳೂರು: ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (37) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ. 

ಅಂಗಾಂಗ ಕಸಿ ಕಾರ್ಯ ಮುಗಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರಿಂದ ಅಪೋಲೊ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಇದರಂತೆ ಆಸ್ಪತ್ರೆ ಹಾಗೂ ಪೊಲೀಸರ ಅಂತಿಮ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ವಿಜಯ್‌ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

ಸಂಚಾರಿ ವಿಜಯ್ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ 10ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. 

ನಂತರ ಸಂಜೆ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಟ ವಿಜಯ್ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT