ಸಿನಿಮಾ ಸುದ್ದಿ

ಬ್ರಾಹ್ಮಣರ ಅವಹೇಳನ: ನಟ ಚೇತನ್ ಪೊಲೀಸ್ ವಿಚಾರಣೆಗೆ ಹಾಜರು

Raghavendra Adiga

ಬೆಂಗಳೂರು: ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಡಿ 'ಆ ದಿನಗಳು' ಚಿತ್ರ ಖ್ಯಾತಿಯ ಚೇತನ್ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.

ತಮ್ಮ ಸ್ನೇಹಿತರು ಹಾಗೂ ವಕೀಲರೊಂದಿಗೆ ಚೇತನ್ ಇಂದು ಬಸವನಗುಡಿ ಇನ್ಸ್​ಪೆಕ್ಟರ್ ಆರ್. ರಮೇಶ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್‌ ಕುಮಾರ್ ಶರ್ಮಾ ಎಂಬುವರು ತಮ್ಮ ವಿರುದ್ಧ ದೂರು ನೀಡಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟ ವಿಡಿಯೋಗಳನ್ನು ಯೂಟ್ಯೂಬ್ ಹಾಗೂ ಫೇಸ್‌ಬುಕ್‌ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ವಿಡಿಯೊಗಳನ್ನು ಯಾವ ಐ.ಡಿ.ಗಳಿಂದ ಅಪ್‌ಲೋಡ್ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಪೊಲೀಸರು ನೋಟಿಸ್ ನಲ್ಲಿ ಸೂಚಿಸಿದ್ದರು.

ಸದ್ಯ ಚೇತನ್​​ ಅವರ ವಿಚಾರಣೆ ನಡೆಸುತ್ತಿರುವ ಪೊಲೀಸರು, ಫೇಸ್ ಬುಕ್​ನಲ್ಲಿ ಹಾಕಿರುವ ಪೋಸ್ಟ್ ಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

SCROLL FOR NEXT