ಭಜರಂಗಿ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ ನಟನೆಯ 'ಭಜರಂಗಿ 2' ಆಗಸ್ಟ್ ನಲ್ಲಿ ರಿಲೀಸ್ ಸಾಧ್ಯತೆ!

ಲಾಕ್ ಡೌನ್ ನಿಧಾನವಾಗಿ ತೆರವಾಗುತ್ತಿರುವ ಬೆನ್ನಲ್ಲೇ ಹಲವು ಸಿನಿಮಾ ತಯಾರಕರು ತಮ್ಮ ಚಿತ್ರಗಳ ಶೂಟಿಂಗ್ ಪೂರ್ಣಗೊಳಿಸಲು ಮುಂದಾಗಿದ್ದಾರೆ.

ಲಾಕ್ ಡೌನ್ ನಿಧಾನವಾಗಿ ತೆರವಾಗುತ್ತಿರುವ ಬೆನ್ನಲ್ಲೇ ಹಲವು ಸಿನಿಮಾ ತಯಾರಕರು ತಮ್ಮ ಚಿತ್ರಗಳ ಶೂಟಿಂಗ್ ಪೂರ್ಣಗೊಳಿಸಲು ಮುಂದಾಗಿದ್ದಾರೆ.

ಎ ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಸಿನಿಮಾ ಶೇ.60 ರಷ್ಟು ಪೂರ್ಣಗೊಂಡಿದ್ದು ಚಿತ್ರದ ಶೂಟಿಂಗ್ ಮುಂದುವರಿಸಲು ತಯಾರಾಗಿದ್ದಾರೆ.

ಇಂದಿನಿಂದ ಚಿತ್ರೀಕರಣ ಆರಂಭಿಸಲು ನಿರ್ಧರಿಸಿದ್ದು ಉಳಿದ ಶೇ.40 ರಷ್ಟು ಶೂಟಿಂಗ್ ಪೂರ್ಣಗೊಳಿಸಲಿದ್ದೇವೆ, ಸಂಗೀತ್ ನಿರ್ದೇಶಕ ಅರ್ಜುನ್ ಜನ್ಯ ಜೊತೆಗೂಡಿ ಕೆಲಸ ಪುನಾರಂಭಿಸಲಿದ್ದೇವೆ ಎಂದು ನಿರ್ದೇಶಕ ಹರ್ಷ ತಿಳಿಸಿದ್ದಾರೆ.

ಇಂದಿನಿಂದ ಸಿನಿಮಾದ ರಿ ರೆಕಾರ್ಡಿಂಗ್  ಆರಂಭವಾಗಲಿದ್ದು, ಮೊದಲ ಕಾಪಿ ಹೊರಬರಲಿದೆ. ಭಜರಂಗಿ ಸಿನಿಮಾವನ್ನು ಜಯಣ್ಣ ನಿರ್ಮಿಸುತ್ತಿದ್ದಾರೆ.

ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಮಾಡುವ ನಿಟ್ಟಿನಲ್ಲಿ ಚಿತ್ರತಂಡ ಕೆಲಸ ಮಾಡುತ್ತಿದ್ದು, ನಿರ್ಮಾಪಕರಾದ ಜಯಣ್ಣ-ಬೋಗೇಂದ್ರ  ಸಿನಿಮಾ ಬಿಡುಗಡೆ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. 

ಸರ್ಕಾರ ಥಿಯೇಟರ್ ಗಳಲ್ಲಿ ಶೇ.100 ರಷ್ಟು  ಸೀಟಿಗೆ ಅನುಮತಿ ನೀಡುತ್ತದೆಯೇ ಎಂಬುದರ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಭಜರಂಗಿ ಕಮರ್ಷಿಯಲ್ ಸಿನಿಮಾವಾಗಿದ್ದು, ಥಿಯೇಟರ್ ನಲ್ಲಿ ರಿಲೀಸ್ ಆಗುವ ಮೊದಲ ಸಿನಿಮಾ ವಾಗುವ ಸಾಧ್ಯತೆಯಿದೆ.

ಶಿವರಾಜ್ ಕುಮಾರ್- ಹರ್ಷ ಕಾಂಬಿನೇಷನ್ ನ ಮೂರನೇ ಸಿನಿಮಾ ಇದಾಗಿದೆ. ಈ ಮೊದಲು ವಜ್ರಕಾಯ, ಭಜರಂಗಿ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಈ ಇಬ್ಬರು ವೇದ ಎಂಬ ಮತ್ತೊಂದು ಸಿನಿಮಾಗಾಗಿ 4ನೇ ಬಾರಿ ಜೊತೆಯಾಗುತ್ತಿದ್ದಾರೆ.

ವೇದ ಸಿನಿಮಾ ಶಿವರಾಜ್ ಕುಮಾರ್ ಅವರ 125 ನೇ ಸಿನಿಮಾವಾಗಲಿದೆ, ಭಜರಂಗಿ-1 ಸಿನಿಮಾದಲ್ಲಿ ಶಿವಣ್ಣನಿಗೆ ಭಾವನಾ ನಾಯಕಿಯಾಗಿದ್ದಾರೆ, ಶೃತಿ, ಲೋಕಿ, ಚೆಲುವರಾಜ್ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT