ಕುಟುಂಬದೊಂದಿಗೆ ಸೆಲೆಬ್ರಿಟಿ ದಂಪತಿ ರಘು ಮುಖರ್ಜಿ, ಅನುಪ್ರಭಾಕರ್ 
ಸಿನಿಮಾ ಸುದ್ದಿ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ರಾಯಭಾರಿಗಳಾಗಿ ಸೆಲೆಬ್ರಿಟಿ ದಂಪತಿ ರಘು ಮುಖರ್ಜಿ, ಅನು ಪ್ರಭಾಕರ್ ನೇಮಕ

ವನ್ಯಜೀವಿಗಳನ್ನು ದತ್ತು ಪಡೆಯುವ ವಿಚಾರ ಕುರಿತು ಮೊದಲಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಈ ಹಾದಿಯಲ್ಲಿ ಇದೀಗ ಸೆಲೆಬ್ರಿಟಿ ದಂಪತಿ ರಘು ಮುಖರ್ಜಿ ಮತ್ತು ಅನುಪ್ರಭಾಕರ್ ಸೇರಿದ್ದಾರೆ.

ಬೆಂಗಳೂರು: ವನ್ಯಜೀವಿಗಳನ್ನು ದತ್ತು ಪಡೆಯುವ ವಿಚಾರ ಕುರಿತು ಮೊದಲಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಈ ಹಾದಿಯಲ್ಲಿ ಇದೀಗ ಸೆಲೆಬ್ರಿಟಿ ದಂಪತಿ ರಘು ಮುಖರ್ಜಿ ಮತ್ತು ಅನುಪ್ರಭಾಕರ್ ಸೇರಿದ್ದಾರೆ.

ಮೃಗಾಲಯಗಳು ಮತ್ತೆ ಆರಂಭವಾಗಿದ್ದು, ಸಂದರ್ಶಕರನ್ನು ಆಕರ್ಷಿಸುವ ಉದ್ದೇಶದೊಂದಿಗೆ ಇವರನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ರಾಯಭಾರಿಗಳಾಗಿ ಇತ್ತೀಚಿಗೆ ನೇಮಕ ಮಾಡಲಾಗಿದೆ. ಪ್ರಾಣಿಗಳ ದತ್ತು ಕುರಿತು ಅರಿವು ಮೂಡಿಸಲು ಅವರು ಎದುರು ನೋಡುತ್ತಿದ್ದು, ಪ್ರಾಣಿಗಳ ಕಲ್ಯಾಣಕ್ಕಾಗಿ ಸ್ವಲ್ಪ ದೇಣಿಗೆ ಸ್ವೀಕರಿಸುವ ವಿಶ್ವಾಸದಲ್ಲಿದ್ದಾರೆ

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್ ಗೋಕುಲ್ ರಘು ಅವರ ಒಳ್ಳೇಯ ಸ್ನೇಹಿತರಾಗಿದ್ದು, ಜೈವಿಕ ಉದ್ಯಾನದ ರಾಯಭಾರಿಯಾಗಲು ಸಲಹೆ ನೀಡಿದರು. ಮೃಗಾಲಯ ಪುನರುಜ್ಜೀವನಕ್ಕೆ ಸ್ವಲ್ಪ ಅಗತ್ಯ ಕೊಡುಗೆ ನೀಡಬೇಕು ಅನಿಸಿತು. ದೇಶದ ಕೆಲ ರಾಷ್ಟ್ರೀಯ ಉದ್ಯಾನಗಳಲ್ಲಿ ಬನ್ನೇರುಘಟ್ಟ ಕೂಡಾ ಒಂದಾಗಿದ್ದು, ಟಿಕೆಟ್ ಮಾರಾಟದಿಂದ ಬರುವ ಆದಾಯದಿಂದ ಮೃಗಾಲಯ ನಡೆಯುತ್ತಿದೆ ಎಂದು ಅನು ಪ್ರಭಾಕರ್ ಹೇಳಿದರು.

ಕೋವಿಡ್-19 ಸಾಂಕ್ರಾಮಿಕದ ಮೊದಲ ಅಲೆಯ ನಂತರ ಮೃಗಾಲಯಕ್ಕೆ ಆಗಮಿಸುವ ಜನರ ಸಂಖ್ಯೆಯೂ ಕಡಿಮೆಯಾಗಿದೆ.ಎರಡನೇ ಅಲೆಯಲ್ಲಿ ಪ್ರಕರಣಗಳು ಹೆಚ್ಚಾದ್ದರಿಂದ ಏಪ್ರಿಲ್ ನಲ್ಲಿ ಮೃಗಾಲಯವನ್ನು ಮುಚ್ಚಲಾಗಿತ್ತು. ಆದ್ದರಿಂದ ಮೃಗಾಲಯಕ್ಕೆ ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದೆ. ಇದೆಲ್ಲಾವನ್ನು ಗೋಕುಲ್ ವಿವರಿಸಿದ ಬಳಿಕ, ಮೃಗಾಲಯದ ರಾಯಭಾರಿಗಳಾಗಿ ನಿರ್ಧರಿಸಿದ್ದಾಗಿ ಅನು ಪ್ರಭಾಕರ್ ತಿಳಿಸಿದರು.

ದರ್ಶನ್ ಪ್ರಾಣಿಗಳ ದತ್ತು ಕುರಿತು ಸಾರ್ವಜನಿಕರಲ್ಲಿ ಮನವಿ ಮಾಡುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ಸಾರ್ವಜನಿಕ ವ್ಯಕ್ತಿಗಳಾಗಿ, ಮೃಗಾಲಯಕ್ಕೆ ಸಹಾಯ ಮಾಡಬೇಕಾಗಿದೆ. ಇತ್ತೀಚಿಗೆ ಈ ಮೃಗಾಲಯದಲ್ಲಿ ಜಿರಾಫೆ ಇರಲಿಲ್ಲ.  ಮೈಸೂರು ಮೃಗಾಲಯದಿಂದ ಜಿರಾಫೆಯನ್ನು ತರಲಾಯಿತು. ಚಿಂಪಾಂಜಿಯನ್ನು ತರುವ ಯೋಜನೆ ಸಹ ಹೊಂದಲಾಗಿದೆ. ಆದರೆ, ಎಲ್ಲದಕ್ಕೂ ಸಂಪನ್ಮೂಲಗಳು ಬೇಕಾಗುತ್ತವೆ ಎಂದು ರಘು ಮುಖರ್ಜಿ ಹೇಳಿದರು. 

ಮೃಗಾಲಯದಲ್ಲಿ 350 ಸಿಬ್ಬಂದಿಗಳಿಗೆ ಸಂಬಳವನ್ನು ಪಾವತಿಸಬೇಕಾಗಿದೆ. ಪ್ರಾಣಿಗಳ ಆಹಾರಕ್ಕಾಗಿ ಪ್ರತಿನಿತ್ಯ 1 ಲಕ್ಷ ರೂಪಾಯಿ ಅಗತ್ಯವಿದೆ. ದರ್ಶನ್ ರಾಜ್ಯದಲ್ಲಿನ ಎಲ್ಲಾ 9 ಮೃಗಾಲಯಗಳ ಬಗ್ಗೆ ಗಮನ ಹರಿಸಿದ್ದರೆ, ನಾವು ಬೆಂಗಳೂರಿನ ಮೃಗಾಲಯದ ಬಗ್ಗೆ ಮಾತ್ರ ಗಮನ ಹರಿಸಿರುವುದಾಗಿ ಅನುಪ್ರಭಾಕರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT