ಮಂಜು ಅಥರ್ವ 
ಸಿನಿಮಾ ಸುದ್ದಿ

ನಿಖಿಲ್ ಕುಮಾರಸ್ವಾಮಿ ಮುಂದಿನ ಆ್ಯಕ್ಷನ್- ಥ್ರಿಲ್ಲರ್ ಸಿನಿಮಾಗೆ ಮಂಜು ಅಥರ್ವ ಡೈರೆಕ್ಷನ್!

ತಮ್ಮ ಮುಂದಿನ ಸಿನಿಮಾವನ್ನು ಬಿಗ್ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡಲಿದೆ ಎಂದು ಈ ಮೊದಲು ನಿಖಿಲ್ ಕುಮಾರಸ್ವಾಮಿ ಹೇಳಿದ್ದರು. ಜಾಗ್ವಾರ್ ನಾಯಕನ ಮುಂದಿನ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿರುವುದನ್ನು ದೃಢಪಡಿಸಿದೆ

ತಮ್ಮ ಮುಂದಿನ ಸಿನಿಮಾವನ್ನು ಬಿಗ್ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡಲಿದೆ ಎಂದು ಈ ಮೊದಲು ನಿಖಿಲ್ ಕುಮಾರಸ್ವಾಮಿ ಹೇಳಿದ್ದರು. ಜಾಗ್ವಾರ್ ನಾಯಕನ ಮುಂದಿನ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿರುವುದನ್ನು  ದೃಢಪಡಿಸಿದೆ.

ಕೆವಿಎನ್ ಪ್ರೊಡಕ್ಷನ್ ನಲ್ಲಿ ಸಖತ್ ಮತ್ತು ಬೈ ಟು ಲವ್ ಸಿನಿಮಾ ತಯಾರಾಗಿದ್ದು ರಿಲೀಸ್ ಆಗಬೇಕಾಗಿದೆ. ನಿಖಿಲ್ ಕುಮಾರಸ್ವಾಮಿ ಸಿನಿಮಾವನ್ನು ಚೊಚ್ಚಲ ನಿರ್ದೇಶಕ ಮಂಜು ಅಥರ್ವ ನಿರ್ದೇಶಿಸುತ್ತಿದ್ದಾರೆ, ಮಂಜು ಅಥರ್ವ ಹಲವು ದೊಡ್ಡ ದೊಡ್ಡ ನಿರ್ದೇಶಕರ ಜೊತೆ ಕೆಲಸ ಮಾಡಿದ್ದಾರೆ.

ಮಂಜು ಮಾಂಡವ್ಯ, ನರ್ತನ್, ಹಾಗೂ ಜೋಗಿ ಪ್ರೇಮ್ ಅವರ ಪ್ರೇ ಪೂಜ್ಯಂ ಮತ್ತು ತಮಿಳು ನಿರ್ದೇಶಕ ಕಾತಿರ್ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಇದೇ  ಮೊದಲ ಬಾರಿಗೆ ಸ್ವತಂತ್ರ್ಯ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು ಎಲ್ಲಾ ಕಮರ್ಷಿಯಲ್ ಅಂಶಗಳನ್ನು ಹೊಂದಿದೆ,  ನಿರ್ದೇಶನದ ಜೊತೆಗೆ ಚಿತ್ರಕಥೆ ಮತ್ತು ಸಂಭಾಷಣೆ ಕೂಡ ಬರೆದಿದ್ದಾರೆ. ನಿಖಿಲ್ ಮತ್ತು ಕೆವಿಎನ್ ಪ್ರೊಡಕ್ಷನ್ ಜೊತೆ ಕೆಲಸ ಮಾಡುತ್ತಿರುವುದು ನನಗೆ ಸಂತಸ ತಂದಿದೆ, ಸಿನಿಮಾ ತಂಡ ಉತ್ತಮ ತಂತ್ರಜ್ಞರನ್ನು  ಹೊಂದಿದೆ ಎಂದು ಮಂಜು ತಿಳಿಸಿದ್ದಾರೆ, ಅಜನೀಶ್ ಲೋಕನಾಥ್ ಸಂಗೀತ ನೀಡಲಿದ್ದಾರೆ.

ಚೊಚ್ಚಲ ನಿರ್ದೇಶಕರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಜೊತೆಗೆ ಸಾಕಷ್ಟು ಜವಾಬ್ದಾರಿಯಿದೆ ಎಂದು ಮಂಜು ಹೇಳಿದ್ದಾರೆ. ಸಿನಿಮಾ ಸದ್ಯಕ್ಕೆ ಕನ್ನಡದಲ್ಲಿ ತಯಾರಾಗಲಿದ್ದು, ಬೇರೆ ಭಾಷೆಯ ಬಗ್ಗೆ ನಿರ್ದೇಶಕರು ಚಿಂತಿಸಲಿದ್ದಾರೆ ಎಂದು ಮಂಜು ತಿಳಿಸಿದ್ದಾರೆ. ಶೂಟಿಂಗ್ ಇನ್ನೂ ಆರಂಭಿಕ ಹಂತದಲ್ಲಿದ್ದು ಆಗಸ್ಟ್ ನಿಂದ ಶೂಟಿಂಗ್ ಆರಂಭವಾಗಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT