ದರ್ಶನ್ 
ಸಿನಿಮಾ ಸುದ್ದಿ

'ಯಜಮಾನ'ನ ಮನವಿಗೆ ಅಪಾರ ಸ್ಪಂದನೆ: ಮೃಗಾಲಯಕ್ಕೆ ಬಂದ ದೇಣಿಗೆ ಎಷ್ಟು ಗೊತ್ತೆ?

ಕೊರೋನಾ ಎರಡನೇ ಅಲೆಯ ಲಾಕ್ ಡೌನ್ ನಿಂದಾಗಿ ಎಲ್ಲ ರಾಜ್ಯದ ಮೃಗಾಲಯಗಳನ್ನು ಬಂದ್ ಮಾಡಲಾಗಿತ್ತು. ಆ ಹಿನ್ನೆಲೆಯ ಮೃಗಾಲಯ ಪ್ರಾಧಿಕಾರಕ್ಕೆ ದೊಡ್ಡ ನಷ್ಟವೇ ಉಂಟಾಗಿತ್ತು. 

ಮೈಸೂರು: ಕೊರೋನಾ ಎರಡನೇ ಅಲೆಯ ಲಾಕ್ ಡೌನ್ ನಿಂದಾಗಿ ಎಲ್ಲ ರಾಜ್ಯದ ಮೃಗಾಲಯಗಳನ್ನು ಬಂದ್ ಮಾಡಲಾಗಿತ್ತು. ಆ ಹಿನ್ನೆಲೆಯ ಮೃಗಾಲಯ ಪ್ರಾಧಿಕಾರಕ್ಕೆ ದೊಡ್ಡ ನಷ್ಟವೇ ಉಂಟಾಗಿತ್ತು. 

ಅದರಿಂದ ಪ್ರಾಣಿ-ಪಕ್ಷಿಗಳ ನಿರ್ವಹಣೆಯೂ ಕಷ್ಟವಾಗಿತ್ತು. ಇಂತಹ ಸಂದರ್ಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಒಂದು ಮನವಿ ಮಾಡಿದ್ದರು. ರಾಜ್ಯದ 9 ಮೃಗಾಲಯದಲ್ಲಿರುವ ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದು, ಅವುಗಳ ನಿರ್ವಹಣೆಗೆ ಸಹಾಯ ಮಾಡಿ ಎಂದು ವಿಡಿಯೋ ಮೂಲಕ ತಿಳಿಸಿದ್ದರು. 

ದರ್ಶನ್ ಮನವಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಕಳೆದ 20 ದಿನಗಳಲ್ಲಿ ಸುಮಾರು 3 ಕೋಟಿ ರು. ಹಣ ದೇಣಿಗೆಯಾಗಿ ಬಂದಿದೆ. ದರ್ಶನ್ ಕರೆ ನೀಡುತ್ತಿದ್ದಂತೆಯೇ ಅಭಿಮಾನಿಗಳಿಂದ ಲಕ್ಷ ಲಕ್ಷ ಹಣ ದೇಣಿಗೆ ರೂಪದಲ್ಲಿ ಮೃಗಾಲಯಕ್ಕೆ ಹರಿದುಬಂದಿತ್ತು. ರಾಜ್ಯದ 9 ಮೃಗಾಲಯದ ಪ್ರಾಣಿ-ಪಕ್ಷಿಗಳನ್ನು Zoos of Karnataka ಆ್ಯಪ್ ಮೂಲಕ ಸುಮಾರು 6 ಸಾವಿರ ಜನರು ದತ್ತು ಪಡೆದಿದ್ದಾರೆ. ಬರೀ ದರ್ಶನ್‌ ಅಭಿಮಾನಿಗಳು ಮಾತ್ರವಲ್ಲದೆ, ಸಿನಿಮಾ ಕಲಾವಿದರು ಕೂಡ ದತ್ತು ಪಡೆದುಕೊಂಡಿದ್ದಾರೆ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹಾದೇವ ಸ್ವಾಮಿ ತಿಳಿಸಿದ್ದಾರೆ.

ಇನ್ನೂ ದರ್ಶನ್ ಅವರ ಈ ಕಾರ್ಯಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಮೃಗಾಲಯಗಳನ್ನು ಬಂದ್ ಮಾಡಲಾಗಿತ್ತು. ಇದೀಗ ಅನ್‌ಲಾಕ್‌ ಶುರುವಾಗಿರುವುದರಿಂದ, ನಿಧಾನವಾಗಿ ಮೃಗಾಲಯಗಳು ತೆರೆಯುತ್ತಿವೆ. ಬೆಳಗಾವಿ, ಗದಗ, ಹಂಪಿಯ ಮೃಗಾಲಯಗಳನ್ನು ತೆರೆಯಲಾಗಿದೆ. ಕೊವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪ್ರವಾಸಿಗರಿಗೆ ಪ್ರವೇಶ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT