ರವಿಚಂದ್ರನ್ 
ಸಿನಿಮಾ ಸುದ್ದಿ

'ಕನ್ನಡಿಗ' ಸಿನಿಮಾ ಚಿತ್ರೀಕರಣ ಪ್ರಾರಂಭಿಸಲಿರುವ ರವಿಚಂದ್ರನ್

'ಕನ್ನಡಿಗ ಸಿನಿಮಾದ ಚಿತ್ರೀಕರಣದ ಮೂಲಕ ನಟ ರವಿಚಂದ್ರನ್ ಸಿನಿಮಾ ಚಿತ್ರೀಕರಣಗಳನ್ನು ಪ್ರಾರಂಭಿಸಲಿದ್ದಾರೆ. 

'ಕನ್ನಡಿಗ ಸಿನಿಮಾದ ಚಿತ್ರೀಕರಣದ ಮೂಲಕ ನಟ ರವಿಚಂದ್ರನ್ ಸಿನಿಮಾ ಚಿತ್ರೀಕರಣಗಳನ್ನು ಪ್ರಾರಂಭಿಸಲಿದ್ದಾರೆ. 

ಕನ್ನಡಿಗ ಸಿನಿಮಾ ಸ್ಥಳೀಯ ಸಂಸ್ಕೃತಿಯ ಕಥಾಹಂದರವನ್ನು ಹೊಂದಿರುವ ಸಿನಿಮಾ ಆಗಿದ್ದು, ಸೆನ್ಸಾರ್ ಸರ್ಟಿಫಿಕೇಟ್ ನ್ನೂ ಪಡೆದುಕೊಂಡಿದೆ. ಕೊನೆಯ ಹಾಡಿನ ಚಿತ್ರೀಕರಣವಷ್ಟೇ ಬಾಕಿ ಇದೆ. ಈ ಹಾಡನ್ನು ನಟ ಶಿವರಾಜ್ ಕುಮಾರ್ ಹಾಡಿದ್ದು, ಜಾನಪದ ಥೀಮ್ ನ್ನು ಹೊಂದಿದೆ ಹಾಗೂ ಎ.ಹರ್ಷ ನೃತ್ಯ ನಿರ್ದೇಶನ ಮಾಡಿದ್ದಾರೆ. 

ಬಿ.ಎಂ ಗಿರಿರಾಜ್ ನಿರ್ದೇಶನ, ಎನ್.ಎಸ್ ರಾಜ್ ಕುಮಾರ್ ಅವರ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದ್ದು, ಮೊದಲ ಲಾಕ್ ಡೌನ್ ನ ನಿರ್ಬಂಧಗಳು ಸಡಿಲಿಕೆಯಾದಾಗ ಪ್ರಾರಂಭದಲ್ಲಿ ಈ ಚಿತ್ರದ ಚಿತ್ರೀಕರಣ ಪ್ರಾರಂಭಗೊಂಡಿತ್ತು. ಈ ವಾರದಲ್ಲಿ ಹಾಡಿನ ಚಿತ್ರೀಕರಣವೂ ನಡೆಯಲಿದ್ದು, ಈ ಸಿನಿಮಾದಲ್ಲಿ ರವಿಚಂದ್ರನ್ ಗುಣಭದ್ರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಫ್ಲ್ಯಾಷ್‌ಬ್ಯಾಕ್ ಕಥೆಯಲ್ಲಿ ರವಿಚಂದ್ರನ್ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟಾಮ್ ಆಲ್ಟಾರ್ ಅವರ ಪುತ್ರ ಜೇಮೀ ಆಲ್ಟರ್ ನಟಿಸುತ್ತಿರುವ ಮೊದಲ ಚಿತ್ರವೂ ಇದಾಗಿದ್ದು, ರೆವರೆಂಡ್ ಫರ್ಡಿನಾಂಡ್ ಕಿಟಲ್ ಪಾತ್ರದಲ್ಲಿ ಇವರು ನಟಿಸಿದ್ದಾರೆ.

ಈ ನಟರೊಂದಿಗೆ ಕನ್ನಡಿಗ ಸಿನಿಮಾದಲ್ಲಿ ಪಾವನ, ರಾಕ್ ಲೈನ್ ವೆಂಕಟೇಶ್, ಬಾಲಾಜಿ ಮನೋಹರ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದು, ಜಿಎಸ್ ವಿ ಸೀತಾರಾಮ್ ಛಾಯಾಗ್ರಹಣ ಇದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಜವಾಬ್ದಾರಿಯನ್ನು ಗಿರಿರಾಜ್ ನಿರ್ವಹಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟನ್ ರೈಲಿನಲ್ಲಿ ದುಷ್ಕರ್ಮಿಗಳಿಂದ ಸಾಮೂಹಿಕ ಇರಿತ: 9 ಜನರ ಸ್ಥಿತಿ ಗಂಭೀರ, ಇಬ್ಬರು ಶಂಕಿತರ ಬಂಧನ

ಭಾರೀ ಮಳೆಯಿಂದಾಗಿ ಟಾಸ್ ರದ್ದಾದ ಕಾರಣ ಭಾರತ-ಆಫ್ರಿಕಾ ಫೈನಲ್ ವಿಳಂಬ: ಇಂದು ಯಾರೇ ಗೆದ್ದರೂ ಇತಿಹಾಸ ಸೃಷ್ಟಿ!

3ನೇ ಟಿ20: ಭಾರತಕ್ಕೆ ಗೆಲ್ಲಲು 187 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

Cricket: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಶ್ವದಾಖಲೆ ಮುರಿದ ಪಾಕಿಸ್ತಾನದ ಬಾಬರ್ ಆಜಂ!

INDIA vs AUSTRALIA, 3rd T20I: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ಸಂಜು ಸ್ಯಾಮ್ಸನ್ ಸೇರಿ ಮೂವರಿಗೆ ಕೊಕ್

SCROLL FOR NEXT