ರಾಮು-ಮಾಲಾಶ್ರೀ-ಜಗ್ಗೇಶ್ 
ಸಿನಿಮಾ ಸುದ್ದಿ

ತಲೆ ಬಾಗಿ ಕ್ಷಮೆ ಕೇಳುವೆ: ಪತಿಯನ್ನು ಕಳೆದುಕೊಂಡ ನಟಿ ಮಾಲಾಶ್ರೀಗೆ ಜಗ್ಗೇಶ್ ಸಾಂತ್ವನ

ಕೊರೋನಾ ಮಹಾಮಾರಿಯಿಂದಾಗಿ ಪತಿಯನ್ನು ಕಳೆದುಕೊಂಡ ನಟಿ ಮಾಲಾಶ್ರೀ ಅವರಿಗೆ ನಟ ಜಗ್ಗೇಶ್ ಸಾಂತ್ವನ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ಪತಿಯನ್ನು ಕಳೆದುಕೊಂಡ ನಟಿ ಮಾಲಾಶ್ರೀ ಅವರಿಗೆ ನಟ ಜಗ್ಗೇಶ್ ಸಾಂತ್ವನ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ್ದು, 'ನಿಮ್ಮ ಕಷ್ಟದಲ್ಲಿ ಭಾಗಿಯಾಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆ ಬಾಗಿ ಕ್ಷಮೆ ಕೋರುವೆ. ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿ ಮಾತ್ರ ಉಳಿದಿದೆ. ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆ ಮಾಡಿ ಅನೇಕ ಚಿತ್ರ ಕಾರ್ಮಿಕರಿಗೆ ಅನ್ನ ನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿ ಕೋರುವೆ ಮನೆಯಲ್ಲಿಯೇ' ಎಂದಿದ್ದಾರೆ.

'ರಾಮು ಮತ್ತೆ ಹುಟ್ಟಿಬರಲಿ ಎನ್ನುವುದು ನನ್ನ ಪ್ರಾರ್ಥನೆ. ದಯಮಾಡಿ ಈ ಸಂಕಷ್ಟವನ್ನು ಎದುರಿಸಿ ಮಕ್ಕಳನ್ನು ರಾಮು ಎತ್ತರಕ್ಕೆ ಬೆಳೆಸಿ. ನಿಮ್ಮ ಜೊತೆ ನಾವು ಉದ್ಯಮದ ಸ್ನೇಹಿತರು ಎಲ್ಲರೂ ಇರುತ್ತೇವೆ. ಮುಂದಿನ ಸಾಂಸಾರಿಕ ಜೀವನ ನಿಭಾಯಿಸುವ ಶಕ್ತಿ ಆ ರಾಯರು ನಿಮಗೆ ನೀಡಲಿ' ಎಂದು ಹೇಳಿದ್ದಾರೆ.

ಕಳೆದ ಸೋಮವಾರ ಕನ್ನಡದ ಕೋಟಿ ನಿರ್ಮಾಪಕ ರಾಮು ಅವರು ಕೊರೋನಾಗೆ ಬಲಿಯಾಗಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ನಡೆ 'ಹೇಡಿತನದ ಪರಮಾವಧಿ'; ನರವಾಣೆ ಪುಸ್ತಕ 56 ಇಂಚಿನ ಎದೆಯೊಳಗಿನ ಪುಕ್ಕಲುತನ ಬಯಲು ಮಾಡಿದೆ!

ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅಪ್ರಕಟಿತ ಪುಸ್ತಕ ಪ್ರಸಾರ: ದೆಹಲಿ ಪೊಲೀಸರಿಂದ FIR, ರಾಹುಲ್ ಗಾಂಧಿ ವಿಚಾರಣೆ?

A+ ಗೆ ಕೊಕ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಹಿಂಬಡ್ತಿ: BCCI ಆಟಗಾರರ ವಾರ್ಷಿಕ ಒಪ್ಪಂದ ಘೋಷಣೆ!

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

ಮಧ್ಯಪ್ರದೇಶ: ದೇವಸ್ಥಾನದ ಮೇಲ್ಛಾವಣಿ ಕುಸಿದು ಮೂವರು ಬಾಲಕಿಯರು ಸಾವು, 6 ಮಂದಿಗೆ ಗಾಯ

SCROLL FOR NEXT