ರಾಮು-ಮಾಲಾಶ್ರೀ-ಜಗ್ಗೇಶ್ 
ಸಿನಿಮಾ ಸುದ್ದಿ

ತಲೆ ಬಾಗಿ ಕ್ಷಮೆ ಕೇಳುವೆ: ಪತಿಯನ್ನು ಕಳೆದುಕೊಂಡ ನಟಿ ಮಾಲಾಶ್ರೀಗೆ ಜಗ್ಗೇಶ್ ಸಾಂತ್ವನ

ಕೊರೋನಾ ಮಹಾಮಾರಿಯಿಂದಾಗಿ ಪತಿಯನ್ನು ಕಳೆದುಕೊಂಡ ನಟಿ ಮಾಲಾಶ್ರೀ ಅವರಿಗೆ ನಟ ಜಗ್ಗೇಶ್ ಸಾಂತ್ವನ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ಪತಿಯನ್ನು ಕಳೆದುಕೊಂಡ ನಟಿ ಮಾಲಾಶ್ರೀ ಅವರಿಗೆ ನಟ ಜಗ್ಗೇಶ್ ಸಾಂತ್ವನ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ್ದು, 'ನಿಮ್ಮ ಕಷ್ಟದಲ್ಲಿ ಭಾಗಿಯಾಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆ ಬಾಗಿ ಕ್ಷಮೆ ಕೋರುವೆ. ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿ ಮಾತ್ರ ಉಳಿದಿದೆ. ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆ ಮಾಡಿ ಅನೇಕ ಚಿತ್ರ ಕಾರ್ಮಿಕರಿಗೆ ಅನ್ನ ನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿ ಕೋರುವೆ ಮನೆಯಲ್ಲಿಯೇ' ಎಂದಿದ್ದಾರೆ.

'ರಾಮು ಮತ್ತೆ ಹುಟ್ಟಿಬರಲಿ ಎನ್ನುವುದು ನನ್ನ ಪ್ರಾರ್ಥನೆ. ದಯಮಾಡಿ ಈ ಸಂಕಷ್ಟವನ್ನು ಎದುರಿಸಿ ಮಕ್ಕಳನ್ನು ರಾಮು ಎತ್ತರಕ್ಕೆ ಬೆಳೆಸಿ. ನಿಮ್ಮ ಜೊತೆ ನಾವು ಉದ್ಯಮದ ಸ್ನೇಹಿತರು ಎಲ್ಲರೂ ಇರುತ್ತೇವೆ. ಮುಂದಿನ ಸಾಂಸಾರಿಕ ಜೀವನ ನಿಭಾಯಿಸುವ ಶಕ್ತಿ ಆ ರಾಯರು ನಿಮಗೆ ನೀಡಲಿ' ಎಂದು ಹೇಳಿದ್ದಾರೆ.

ಕಳೆದ ಸೋಮವಾರ ಕನ್ನಡದ ಕೋಟಿ ನಿರ್ಮಾಪಕ ರಾಮು ಅವರು ಕೊರೋನಾಗೆ ಬಲಿಯಾಗಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT