ನಟ ಜಗ್ಗೇಶ್ 
ಸಿನಿಮಾ ಸುದ್ದಿ

ನಿರ್ದಯವಾಗಿ ಲಾಠಿಯಲ್ಲಿ ಹೊಡೆಯಬೇಡಿ, ನಟ ಜಗ್ಗೇಶ್ ಪೊಲೀಸರಿಗೆ ಮನವಿ

ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಮಿತ್ಯ ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್‌, ಪೊಲೀಸ್‌ ಇಲಾಖೆ ಮುಖ್ಯಸ್ಥರಿಗೆ ಮನವಿಯೊಂದನ್ನು ಮಾಡಿದ್ದಾರೆ. 

ಬೆಂಗಳೂರು: ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಮಿತ್ಯ ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್‌, ಪೊಲೀಸ್‌ ಇಲಾಖೆ ಮುಖ್ಯಸ್ಥರಿಗೆ ಮನವಿಯೊಂದನ್ನು ಮಾಡಿದ್ದಾರೆ. 

ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಜಗ್ಗೇಶ್, ‘ರಾಜ್ಯದ ಆರಕ್ಷಕ ಇಲಾಖೆಯ ಮುಖ್ಯಸ್ಥರಿಗೆ ವಿನಂತಿ. ಸರ್ಕಾರ ಹಾಗೂ ತಮ್ಮ ಆದೇಶ ಪಾಲಿಸದವರಿಗೆ  ದಂಡ ಹಾಕಿ ವಾಹನ ಜಪ್ತಿ ಮಾಡಿದರೆ ತೊಂದರೆ ಇಲ್ಲ. ಆದರೆ ನಿರ್ದಯವಾಗಿ ಲಾಠಿಯಲ್ಲಿ ಹೊಡೆಯಬೇಡಿ. ಯುವಕರಾದರೆ ಪರವಾಗಿಲ್ಲಾ ತಡೆಯುತ್ತಾರೆ. ಆದರೆ ವಯಸ್ಸಾದವರು ಪಾಪ ಯಾವ ಕಾಯಿಲೆ ಇರುತ್ತದೆ ನಿಮಗೇನು ತಿಳಿದಿರುತ್ತದೆ.ಕೆಲ ಅಧಿಕಾರಿಗಳು ಒಂದು ಏಟುಕೊಟ್ಟು ಭಯಪಡಿಸುವ  ಬದಲು ಪ್ರಾಣಹೋಗುವಂತೆ ಹೊಡೆಯುತ್ತಾರೆ ಎಂದಿದ್ದಾರೆ.

ಈ ಹಾಳಾದ ಕೊರೋನಾ ಮನುಕುಲದ ಅನ್ನ ದುಡಿಮೆ ನೆಮ್ಮದಿಯನ್ನು ಕಸಿದಿದೆ. ಮನುಷ್ಯರಾಗಿ ನಾವು ಮನುಷ್ಯತ್ವ ಪಾಲಿಸುವ. ಜನತೆಯಲ್ಲಿ ಒಂದು ಮನವಿ, ಈ ರೋಗ ಮನುಕುಲದ ಸಾವಿಗಾಗಿಯೇ ಬಂದಿದೆ. ದಯಮಾಡಿ ಸ್ವಲ್ಪ ದಿನ ವೈದ್ಯಲೋಕದ ಮಾತಿನಂತೆ ಕೆಲ ತಿಂಗಳು ಎಚ್ಚರವಾಗಿ ಇದ್ದುಬಿಡಿ’ ಎಂದು ಅವರು ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!