ನಟ ಜಗ್ಗೇಶ್ 
ಸಿನಿಮಾ ಸುದ್ದಿ

ನಿರ್ದಯವಾಗಿ ಲಾಠಿಯಲ್ಲಿ ಹೊಡೆಯಬೇಡಿ, ನಟ ಜಗ್ಗೇಶ್ ಪೊಲೀಸರಿಗೆ ಮನವಿ

ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಮಿತ್ಯ ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್‌, ಪೊಲೀಸ್‌ ಇಲಾಖೆ ಮುಖ್ಯಸ್ಥರಿಗೆ ಮನವಿಯೊಂದನ್ನು ಮಾಡಿದ್ದಾರೆ. 

ಬೆಂಗಳೂರು: ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಮಿತ್ಯ ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್‌, ಪೊಲೀಸ್‌ ಇಲಾಖೆ ಮುಖ್ಯಸ್ಥರಿಗೆ ಮನವಿಯೊಂದನ್ನು ಮಾಡಿದ್ದಾರೆ. 

ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಜಗ್ಗೇಶ್, ‘ರಾಜ್ಯದ ಆರಕ್ಷಕ ಇಲಾಖೆಯ ಮುಖ್ಯಸ್ಥರಿಗೆ ವಿನಂತಿ. ಸರ್ಕಾರ ಹಾಗೂ ತಮ್ಮ ಆದೇಶ ಪಾಲಿಸದವರಿಗೆ  ದಂಡ ಹಾಕಿ ವಾಹನ ಜಪ್ತಿ ಮಾಡಿದರೆ ತೊಂದರೆ ಇಲ್ಲ. ಆದರೆ ನಿರ್ದಯವಾಗಿ ಲಾಠಿಯಲ್ಲಿ ಹೊಡೆಯಬೇಡಿ. ಯುವಕರಾದರೆ ಪರವಾಗಿಲ್ಲಾ ತಡೆಯುತ್ತಾರೆ. ಆದರೆ ವಯಸ್ಸಾದವರು ಪಾಪ ಯಾವ ಕಾಯಿಲೆ ಇರುತ್ತದೆ ನಿಮಗೇನು ತಿಳಿದಿರುತ್ತದೆ.ಕೆಲ ಅಧಿಕಾರಿಗಳು ಒಂದು ಏಟುಕೊಟ್ಟು ಭಯಪಡಿಸುವ  ಬದಲು ಪ್ರಾಣಹೋಗುವಂತೆ ಹೊಡೆಯುತ್ತಾರೆ ಎಂದಿದ್ದಾರೆ.

ಈ ಹಾಳಾದ ಕೊರೋನಾ ಮನುಕುಲದ ಅನ್ನ ದುಡಿಮೆ ನೆಮ್ಮದಿಯನ್ನು ಕಸಿದಿದೆ. ಮನುಷ್ಯರಾಗಿ ನಾವು ಮನುಷ್ಯತ್ವ ಪಾಲಿಸುವ. ಜನತೆಯಲ್ಲಿ ಒಂದು ಮನವಿ, ಈ ರೋಗ ಮನುಕುಲದ ಸಾವಿಗಾಗಿಯೇ ಬಂದಿದೆ. ದಯಮಾಡಿ ಸ್ವಲ್ಪ ದಿನ ವೈದ್ಯಲೋಕದ ಮಾತಿನಂತೆ ಕೆಲ ತಿಂಗಳು ಎಚ್ಚರವಾಗಿ ಇದ್ದುಬಿಡಿ’ ಎಂದು ಅವರು ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT