ಸುದೀಪ್ 
ಸಿನಿಮಾ ಸುದ್ದಿ

ಚಾಮರಾಜನಗರ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ನಟ ಸುದೀಪ್ ಸಹಾಯಹಸ್ತ

ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಖ್ಯಾತಿಯ ಕಿಚ್ಚ ಸುದೀಪ್ ಇತ್ತೀಚೆಗೆ ಸಂಭವಿಸಿದ್ದ ಚಾಮರಾಜನಗರ ದುರಂತದಲ್ಲಿ ಮಡಿದ ಕುಟುಂಬಗಳಿಗೆ ನೆರವಿಗಾಗಿ ಧಾವಿಸಿದ್ದಾರೆ

ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಖ್ಯಾತಿಯ ಕಿಚ್ಚ ಸುದೀಪ್ ಇತ್ತೀಚೆಗೆ ಸಂಭವಿಸಿದ್ದ ಚಾಮರಾಜನಗರ ದುರಂತದಲ್ಲಿ ಮಡಿದ ಕುಟುಂಬಗಳಿಗೆ ನೆರವಿಗಾಗಿ ಧಾವಿಸಿದ್ದಾರೆ.

ಆಮ್ಲಜನಕ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವಿಗೀಡಾದವರ ಕುಟುಂಬಗಳ ಪೈಕಿ ಅರ್ಧದಷ್ಟು ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಸುದೀಪ್ ನಡೆಸುತ್ತಿರುವ ಚಾರಿಟೆಬಲ್ ಟ್ರಸ್ಟ್ ವಹಿಸಿಕೊಂಡಿದೆ.

ಚಾಮರಾಜನಗರದ ದುರಂತದಲ್ಲಿ ಒಟ್ಟೂ 24 ಮಂದಿ ಸಾವನ್ನಪ್ಪಿದ್ದರು, ಈ ಪೈಕಿ ತೀರಾ ಅಗತ್ಯವಿರುವ 12 ಮಂದಿಯ ಕುಟುಂಬದ ಜವಾಬ್ದಾರಿಯನ್ನು ಟ್ರಸ್ಟ್ ವಹಿಸಿಕೊಂಡಿದೆ ಎಂದು ಟ್ರಸ್ಟ್ ಸದಸ್ಯರಾದ ರಮೇಶ್ ಹೇಳಿದ್ದಾರೆ. 

ಸಾವನ್ನಪ್ಪಿರುವ ಕುಟುಂಬದ ಪೈಕಿ 12  ಕುಟುಂಬದ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನೂ ಸಹ ಟ್ರಸ್ಟ್ ನೋಡಿಕೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT