ಸಿನಿಮಾ ಸುದ್ದಿ

'ಒಳಗೆ ಸೇರಿದರೆ ಗುಂಡು' ಹಾಡು ಖ್ಯಾತ ಚಿತ್ರಸಾಹಿತಿ ಶ್ರೀರಂಗ ಇನ್ನಿಲ್ಲ 

Sumana Upadhyaya

ಬೆಂಗಳೂರು:'ಒಳಗೆ ಸೇರಿದರೆ ಗುಂಡು,,,ಹುಡುಗಿಯಾಗುವಳು ಗಂಡು' ಮಾಲಾಶ್ರೀ ಅಭಿನಯದ ನಂಜುಂಡಿ ಕಲ್ಯಾಣ ಚಿತ್ರದ ಈ ಗೀತೆ ಇಂದಿಗೂ ಸಾಕಷ್ಟು ಜನಪ್ರಿಯ, ಈ ಗೀತೆಯ ಸಾಲುಗಳನ್ನು ಬರೆದ ಚಿತ್ರಸಾಹಿತಿ ಶ್ರೀರಂಗ ಇನ್ನಿಲ್ಲ.

86 ವರ್ಷ ವಯಸ್ಸಾಗಿದ್ದ ಶ್ರೀರಂಗ ಅವರು ನಿನ್ನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದು, ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಜಟಕಾ ಕುದುರೆ ಹತ್ತಿ ಪ್ಯಾಟಗ್ ಹೋಗುಮಾ, ರಂಭೆ ನೀ ವಯ್ಯಾರದ ಗೊಂಬೆ, ಬಾರೆ ಬಾರೆ ಕಲ್ಯಾಣ ಮಂಟಪಕ್ಕೆ ಬಾ, ಸುಮ್ ಸುಮ್ನೆ ಓಳ್ ಬಿಡೋ ಸುಂದರಿ ಸೇರಿದಂತೆ ಸಾಕಷ್ಟು ಸಾವಿರಕ್ಕೂ ಹೆಚ್ಚು ಚಿತ್ರಗೀತೆಗಳನ್ನು, ಕೆಲವು ಚಿತ್ರಗಳಿಗೆ ಸಂಭಾಷಣೆ-ಸಾಹಿತ್ಯವನ್ನು ಬರೆದಿದ್ದರು.

ಕಳೆದ ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀರಂಗ ಅವರು ನಿನ್ನೆ ಕೊನೆಯುಸಿರೆಳೆದಿದ್ದಾರೆ. 

SCROLL FOR NEXT