ಸುನೀಲ್ ಕುಮಾರ್ ದೇಸಾಯಿ ಮತ್ತು ಅನಿಲ್ ಸಿದ್ಧು 
ಸಿನಿಮಾ ಸುದ್ದಿ

ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ಜೊತೆ ಕೆಲಸ ಮಾಡಲು ಅನಿಲ್ ಸಿದ್ದು ರೆಡಿ

ಕನ್ನಡ ಸಿನಿಮಾಗಳಲ್ಲಿ ಸಕ್ರಿಯರಾಗಿರುವ ಅನಿಲ್ ಸಿದ್ದು, ಬಹುತೇಕ ವಿಲನ್ ಪಾತ್ರಗಳಲ್ಲಿ ನಟಿಸಿರುವ ಅನಿಲ್ ಸಿದ್ಧು ವಿಷಯಾಧಾರಿತ ಕತೆಯಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.

ಕನ್ನಡ ಸಿನಿಮಾಗಳಲ್ಲಿ ಸಕ್ರಿಯರಾಗಿರುವ ಅನಿಲ್ ಸಿದ್ದು, ಬಹುತೇಕ ವಿಲನ್ ಪಾತ್ರಗಳಲ್ಲಿ ನಟಿಸಿರುವ ಅನಿಲ್ ಸಿದ್ಧು ವಿಷಯಾಧಾರಿತ ಕತೆಯಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.

ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅವರ ಜೊತೆ ಕೆಲಸ ಮಾಡುವ ತಮ್ಮ ಕನಸು ನನಸಾಗಿದೆ ಎಂದು ಹೇಳಿದ್ದಾರೆ.

ಧರ್ಮ ಕೀರ್ತಿರಾಜ್ ಚಿತ್ರದಲ್ಲಿ ಖಳನಾಯಕನಾಗಿ ಪಾದಾರ್ಪಣೆ ಮಾಡಿದ ಈ ನಟ, ಸಿಲಿಕಾನ್ ಸಿಟಿ, ಪಡ್ಡೆ ಹುಲಿ, ಮತ್ತು ಇನ್ನೂ ಬಿಡುಗಡೆಯಾಗಬೇಕಾದ ವರದ ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಉಪೇಂದ್ರ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ವಿಜಯ್ ಸೂರ್ಯ ನಿರ್ದೇಶನದ ಚಿತ್ರ ಎ ++ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದರು.

ವಿರಾಟ ಪರ್ವ ರಿಲೀಸ್ ಗಾಗಿ ಕಾಯುತ್ತಿದ್ದಾರೆ, ಬ್ರೇಕ್ ಗಾಗಿ ಹಂಬಲಿಸುತ್ತಿರುವ ನಟ ಅನಿಲ್ ಸಿದ್ಧು ಸುನೀಲ್ ಕುಮಾರ್ ದೇಸಾಯಿ ಜೊತೆ ಕೆಲಸ ಮಾಡಲು ಉತ್ಸುಕರಾಗಿದ್ದಾರೆ.

ನಮ್ಮ ಹೊಸ ಸ್ಟುಡಿಯೊ 'ಗಾಡ್ ಕಿಸ್ ಯು ಕ್ರಿಯೇಷನ್ಸ್'ಗೆ ನಾವು ನಿರ್ದೇಶಕರನ್ನು ಆಹ್ವಾನಿಸಿದ್ದೆವು, ಅವರು ನನ್ನ ಕೆಲವು ಫೋಟೋಗಳನ್ನು ನೋಡುವಾಗ, ನನಗಾಗಿ ಒಂದು ವಿಶಿಷ್ಟ ಕತೆ ಮಾಡುವುದಾಗಿ ತಿಳಿಸಿದ್ದಾರೆ.

ಪ್ರಾಜೆಕ್ಟ್ ಇನ್ನೂ ಆರಂಭದ ಹಂತದಲ್ಲಿದೆ. ಎಲ್ಲಾ ಸಿದ್ದವಾದ ಮೇಲೆ ನಿರ್ದೇಶಕರೇ ಸ್ವತಃ ಸಿನಿಮಾ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ. ತಮಿಳಿನ ಕಥಾತಿ, ನಾನು, ಕಾಟ್ರು ವೆಲಿಯಿದೈ ಮುಂತಾದ ಚಿತ್ರಗಳಲ್ಲಿ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿತು. ಭವಿಷ್ಯದಲ್ಲಿ ವಿವಿಧ ಭಾಷೆಗಳಲ್ಲಿ ಪ್ರಸಿದ್ಧ ನಿರ್ದೇಶಕರೊಂದಿಗೆ ಕೆಲಸ ಮಾಡಲು ನಾನು ಆಶಿಸುತ್ತೇನೆ" ಎಂದು ಅನಿಲ್ ಸಿದ್ಧು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT