ಸಿನಿಮಾ ಸುದ್ದಿ

ಕೊರೋನಾ ವಿರುದ್ಧದ ಹೋರಾಟಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ರಜನಿಕಾಂತ್

Lingaraj Badiger

ಚೆನ್ನೈ: ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ತಲೈವಾ ರಾಜ್ಯ ಸರ್ಕಾರಕ್ಕೆ ನೆರವಾಗಿದ್ದಾರೆ. 

ರಜನಿ ಪರವಾಗಿ ಅವರ ಮಗಳು ಸೌಂದರ್ಯ ಅವರು ಒಂದು ಕೋಟಿ ಮೌಲ್ಯದ ಚೆಕ್ ಅನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.

ತಮಿಳಿನ ಮತ್ತೊಬ್ಬ ನಟ ಅಜಿತ್ ಕುಮಾರ್ ಸಹ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಅಜಿತ್ ಮ್ಯಾನೇಜರ್ ಅಧಿಕೃತವಾಗಿ ತಿಳಿಸಿರುವುದಾಗಿ ವಿಶ್ಲೇಷಕ ರಮೇಶ್ ಬಾಲ ಟ್ವೀಟ್ ಮಾಡಿದ್ದಾರೆ.

ರಜನಿಕಾಂತ್ ನಿನ್ನೆಯಷ್ಟೇ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಹೈದರಾಬಾದ್‌ನಲ್ಲಿ ಅಣ್ಣಾತ್ತೆ ಸಿನಿಮಾದ ಚಿತ್ರೀಕರಣ ಮುಗಿಸಿ ಚೆನ್ನೈಗೆ ಬಂದಿದ್ದ ರಜನಿ, ನಂತರ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

SCROLL FOR NEXT