ನಟ ಉಪೇಂದ್ರ 
ಸಿನಿಮಾ ಸುದ್ದಿ

ನಟ ಉಪೇಂದ್ರ ರೈತರಿಂದ ನೇರವಾಗಿ ಬೆಳೆಗಳನ್ನು ಖರೀದಿಸುತ್ತಾರೆ; ಈ ಮಾಹಿತಿಗಳನ್ನು ನೀಡಿ ಅವರನ್ನು ಸಂಪರ್ಕಿಸಿ...

ಕೊರೋನಾ ಲಾಕ್ ಡೌನ್ ನಗರವಾಸಿಗಳಿಗೆ ಹಲವು ಸಮಸ್ಯೆಗಳನ್ನು ತಂದರೆ, ಹಳ್ಳಿವಾಸಿಗಳಿಗೂ ಇನ್ನು ಕೆಲವು ಸಮಸ್ಯೆಗಳನ್ನು ಉಂಟುಮಾಡಿದೆ. ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಇಲ್ಲದಾಗಿದೆ, ಹಣ್ಣು-ತರಕಾರಿಗಳನ್ನು ಹೇಗೆ ನಗರಗಳಿಗೆ ಸಾಗಣೆ ಮಾಡುವುದು, ಮಾರುಕಟ್ಟೆ ಎಲ್ಲಿದೆ ಎಂಬ ಚಿಂತೆಯಲ್ಲಿ ರೈತರಿದ್ದಾರೆ.

ಬೆಂಗಳೂರು: ಕೊರೋನಾ ಲಾಕ್ ಡೌನ್ ನಗರವಾಸಿಗಳಿಗೆ ಹಲವು ಸಮಸ್ಯೆಗಳನ್ನು ತಂದರೆ, ಹಳ್ಳಿವಾಸಿಗಳಿಗೂ ಇನ್ನು ಕೆಲವು ಸಮಸ್ಯೆಗಳನ್ನು ಉಂಟುಮಾಡಿದೆ. ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಇಲ್ಲದಾಗಿದೆ, ಹಣ್ಣು-ತರಕಾರಿಗಳನ್ನು ಹೇಗೆ ನಗರಗಳಿಗೆ ಸಾಗಣೆ ಮಾಡುವುದು, ಮಾರುಕಟ್ಟೆ ಎಲ್ಲಿದೆ ಎಂಬ ಚಿಂತೆಯಲ್ಲಿ ರೈತರಿದ್ದಾರೆ.

ಕೆಲವು ಕಡೆಗಳಲ್ಲಿ ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಯಿಲ್ಲದೆ ನೆಲದಲ್ಲಿ ಚೆಲ್ಲಿದ, ನಾಶಮಾಡಿದ ಉದಾಹರಣೆಗಳು ಸಾಕಷ್ಟಿವೆ.

ಈ ಬಾರಿ ಕೊರೋನಾ ಲಾಕ್ ಡೌನ್ ಸಮಯದ ಆರಂಭದಿಂದಲೂ ನಟ ಉಪೇಂದ್ರ ಅವರು ಸಿನಿಮಾ ವಲಯದ ಕಾರ್ಮಿಕರಿಗೆ, ರೈತರಿಗೆ ಅವರ ಪ್ರಜಾಕೀಯ ತಂಡದ ವತಿಯಿಂದ ಸಹಾಯ ಮಾಡುತ್ತಲೇ ಬಂದಿದ್ದಾರೆ.ಬೆಳೆದ ಬೆಳೆ ವ್ಯಾಪಾರವಾಗದೆ ಸಂಕಷ್ಟದಲ್ಲಿರುವ ರೈತರಿಂದ ನಮಗೆ ಅವಶ್ಯಕತೆಯಿರುವ ಬೆಳೆಗಳನ್ನು ಸೂಕ್ತ ಬೆಲೆ ನೀಡಿ ಕೊಂಡುಕೊಳ್ಳುತ್ತೇವೆ, ಬೆಳೆ ಯಾವುದು, ಎಷ್ಟು ಕೆಜಿಯಿದೆ, ಬೆಲೆ ಎಷ್ಟು, ಸಾಗಾಟ ವೆಚ್ಚ ಎಷ್ಟು ಎಂದು ತಿಳಿಸಿ, ಎಲ್ಲಾ ಮಾಹಿತಿಗಳನ್ನು ವಾಟ್ಸಾಪ್ ಸಂಖ್ಯೆ 9845763396ಗೆ ಹಂಚಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT