ಉಪೇಂದ್ರ-ಧನ್ವೀರ್ 
ಸಿನಿಮಾ ಸುದ್ದಿ

ಕೊರೋನಾ ಸಂಕಷ್ಟ: ರೈತರಿಂದ ಟೊಮ್ಯಾಟೊ ಖರೀದಿಸಿದ ಉಪ್ಪಿ; ವನ್ಯಜೀವಿ ದತ್ತು ಪಡೆದ ಧನ್ವೀರ್!

ಕೊರೋನಾ ಸಂಕಷ್ಟ ಕಾಲದಲ್ಲಿ ತಮ್ಮ ಬೆಳೆಗಳನ್ನು ಮಾರಲು ಸೂಕ್ತ ಮಾರುಕಟ್ಟೆ ಸಿಗದೇ ಕಷ್ಟಪಡುತ್ತಿರುವ ರೈತರ ಬೆಳೆಗಳನ್ನು ಕೊಂಡು ನೆರವು ನೀಡುತ್ತೇವೆ ಎಂದು ಘೋಷಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.

ಬೆಂಗಳೂರು: ಕೊರೋನಾ ಸಂಕಷ್ಟ ಕಾಲದಲ್ಲಿ ತಮ್ಮ ಬೆಳೆಗಳನ್ನು ಮಾರಲು ಸೂಕ್ತ ಮಾರುಕಟ್ಟೆ ಸಿಗದೇ ಕಷ್ಟಪಡುತ್ತಿರುವ ರೈತರ ಬೆಳೆಗಳನ್ನು ಕೊಂಡು ನೆರವು ನೀಡುತ್ತೇವೆ ಎಂದು ಘೋಷಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.

ಮೊದಲ ದಿನವೇ ರೈತರೊಬ್ಬರು ಬೆಳೆದ ಟೊಮ್ಯಾಟೋಗಳನ್ನು ಖರೀದಿಸಿ ಅದನ್ನು ದಿನಸಿ ಕಿಟ್ ನಲ್ಲಿ ಸೇರಿಸಿ ಬಡವರಿಗೆ ಹಂಚಿದ್ದಾರೆ. ಜೊತೆಗೆ ತೀವ್ರ ಸಂಕಷ್ಟದಲ್ಲಿರುವ ರೈತರು ಮಾತ್ರ ಸಂಪರ್ಕಿಸಿ. ಏಕೆಂದರೆ ಇದು ಲಾಭಕ್ಕಾಗಿ ಮಾಡುತ್ತಿರುವ ವ್ಯಾಪಾರ ಅಲ್ಲ ಎಂದು ಉಪೇಂದ್ರ ಮನವಿಯನ್ನೂ ಮಾಡಿದ್ದಾರೆ. ಈಗಾಗಲೇ ಹಲವು ರೈತರು ಉಪೇಂದ್ರರನ್ನು ಸಂಪರ್ಕಿಸುತ್ತಿದ್ದಾರಂತೆ.

ಕೊರೋನಾ ಕಾಲದಲ್ಲಿ ವನ್ಯಜೀವಿ ದತ್ತು ಪಡೆದ ನಟ ಧನ್ವೀರ್
ಕೊರೋನಾ ಸಂಕಷ್ಟ ಕಾಲದಲ್ಲಿ ಸ್ಯಾಂಡಲ್ ವುಡ್ ನಟರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವವರ ನೆರವಿಗೆ ಕೈಜೋಡಿಸಿದ್ದಾರೆ.

ಈ ನಡುವೆ ಯುವ ನಟ ಧನ್ವೀರ್ ಗೌಡ ವನ್ಯ ಜೀವಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ಮೃಗಾಲಯದಲ್ಲಿನ ಎರಡು ಚಿರತೆಗಳನ್ನು ದತ್ತು ಪಡೆದಿರುವ ಧನ್ವೀರ್ ಅವುಗಳ ಪೋಷಣೆ ಜವಾಬ್ಧಾರಿ ಹೊತ್ತುಕೊಂಡಿದ್ದಾರೆ. ಕಳೆದ ವರ್ಷವೂ ಧನ್ವೀರ್ ಪ್ರಾಣಿಗಳ ದತ್ತು ಪಡೆಯುವ ಮೂಲಕ ಸುದ್ದಿಯಾಗಿದ್ದರು. ಈ ವರ್ಷವೂ ಮತ್ತೆ ಲಾಕ್ ಡೌನ್ ವೇಳೆ ಅವುಗಳ ರಕ್ಷಣೆಗೆ ಮುಂದಾಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT