ಮನೋರಂಜನ್-ರವಿಚಂದ್ರನ್ 
ಸಿನಿಮಾ ಸುದ್ದಿ

ಕೋವಿಡ್ ಸಂಕಷ್ಟ: ಮುಗಿಲ್ ಪೇಟೆ'ಗೆ ದುಡಿದವರಿಗೆ ಕ್ರೇಜಿಸ್ಟಾರ್ ಪುತ್ರನಿಂದ ತಲಾ 5 ಸಾವಿರ ಧನ ಸಹಾಯ

ಕಳೆದೊಂದು ವರ್ಷದಿಂದ ಜಗತ್ತನ್ನು ಆವರಿಸಿರುವ ಕೊರೋನಾ ಸಂಕಷ್ಟಕ್ಕೆ ಅನೇಕ ಕುಟುಂಬಗಳು ನಲುಗಿ ಹೋಗಿದೆ. ಕನ್ನಡ ಸಿನೆಮಾ ಕಲಾವಿದರ ಕುಟುಂಬವು ಹೊರತಾಗಿಲ್ಲ. ಇಂತಹ ಕೆಲ ಕಲಾವಿದರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಧನ ಸಹಾಯ ನೀಡಿದ್ದಾರೆ.

ಬೆಂಗಳೂರು: ಕಳೆದೊಂದು ವರ್ಷದಿಂದ ಜಗತ್ತನ್ನು ಆವರಿಸಿರುವ ಕೊರೋನಾ ಸಂಕಷ್ಟಕ್ಕೆ ಅನೇಕ ಕುಟುಂಬಗಳು ನಲುಗಿ ಹೋಗಿದೆ. ಕನ್ನಡ ಸಿನೆಮಾ ಕಲಾವಿದರ ಕುಟುಂಬವು ಹೊರತಾಗಿಲ್ಲ. ಇಂತಹ ಕೆಲ ಕಲಾವಿದರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಧನ ಸಹಾಯ ನೀಡಿದ್ದಾರೆ.

'ಬಹುತೇಕ ಕಲಾವಿದರು, ತಂತ್ರಜ್ಞರು ಮನೆಯಲ್ಲಿ ಸುರಕ್ಷಿತವಾಗಿದ್ದಾರೆಂದು ಭಾವಿಸಿರುತ್ತೇವೆ. ಆದರೆ ನನ್ನ ಅನೇಕ ಕಲಾವಿದ ಸ್ನೇಹಿತರು ಈ ಕೊರೋನ ಸಂದರ್ಭದಲ್ಲಿ ಜೀವನ ನಡೆಸುವುದಕ್ಕೆ ಕಷ್ಟಪಡುತ್ತಿದ್ದಾರೆ. ಹಾಗಾಗಿ ಈ ಸಮಯದಲ್ಲಿ ನನ್ನ ಸ್ನೇಹಿತರ ನೆರವಿಗೆ ನಿಲ್ಲಬೇಕಾದ್ದು ನನ್ನ ಕರ್ತವ್ಯ' ಎಂದು ಮನೋರಂಜನ್ ಹೇಳಿದ್ದಾರೆ.

ಸದ್ಯ ಮುಗಿಲ್ ಪೇಟೆ ಸಿನಿಮಾದಲ್ಲಿ ನಾನು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದೇನೆ. ನನ್ನ ಈ ಒಂದು ವರ್ಷದ ಪ್ರಾಜೆಕ್ಟ್ ನಲ್ಲಿ ನೂರಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದಾರೆ. ನನ್ನ ಸಿನಿಮಾಕ್ಕಾಗಿ ತನುಮನವನ್ನು ಅರ್ಪಿಸಿದ್ದಾರೆ. ಈಗ ಅವರ ಸಂಕಷ್ಟಕಾಲದಲ್ಲಿ ಅವರ ಜೊತೆಗೆ ಅವರ ಕಷ್ಟಕ್ಕೆ ಹೆಗಲು ಕೊಡಬೇಕಾಗಿರುವುದು ನನ್ನ ಜವಾಬ್ದಾರಿ. 

ಹೀಗಾಗಿ ಮುಗಿಲ್ ಪೇಟೆ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ನನ್ನ ಕಡೆಯಿಂದ 5 ಸಾವಿರ ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದು ನನ್ನವರಿಗಾಗಿ ಈ ಸಂದರ್ಭದಲ್ಲಿ ಕೈಲಾದ ಸಹಾಯ ಮಾಡುವ ಸಣ್ಣ ಪ್ರಯತ್ನ. ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ. ಸುರಕ್ಷಿತವಾಗಿರಿ ಎಂದು ಇದೇ ಸಂದರ್ಭದಲ್ಲಿ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ