ಮನೋರಂಜನ್-ರವಿಚಂದ್ರನ್ 
ಸಿನಿಮಾ ಸುದ್ದಿ

ಕೋವಿಡ್ ಸಂಕಷ್ಟ: ಮುಗಿಲ್ ಪೇಟೆ'ಗೆ ದುಡಿದವರಿಗೆ ಕ್ರೇಜಿಸ್ಟಾರ್ ಪುತ್ರನಿಂದ ತಲಾ 5 ಸಾವಿರ ಧನ ಸಹಾಯ

ಕಳೆದೊಂದು ವರ್ಷದಿಂದ ಜಗತ್ತನ್ನು ಆವರಿಸಿರುವ ಕೊರೋನಾ ಸಂಕಷ್ಟಕ್ಕೆ ಅನೇಕ ಕುಟುಂಬಗಳು ನಲುಗಿ ಹೋಗಿದೆ. ಕನ್ನಡ ಸಿನೆಮಾ ಕಲಾವಿದರ ಕುಟುಂಬವು ಹೊರತಾಗಿಲ್ಲ. ಇಂತಹ ಕೆಲ ಕಲಾವಿದರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಧನ ಸಹಾಯ ನೀಡಿದ್ದಾರೆ.

ಬೆಂಗಳೂರು: ಕಳೆದೊಂದು ವರ್ಷದಿಂದ ಜಗತ್ತನ್ನು ಆವರಿಸಿರುವ ಕೊರೋನಾ ಸಂಕಷ್ಟಕ್ಕೆ ಅನೇಕ ಕುಟುಂಬಗಳು ನಲುಗಿ ಹೋಗಿದೆ. ಕನ್ನಡ ಸಿನೆಮಾ ಕಲಾವಿದರ ಕುಟುಂಬವು ಹೊರತಾಗಿಲ್ಲ. ಇಂತಹ ಕೆಲ ಕಲಾವಿದರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಧನ ಸಹಾಯ ನೀಡಿದ್ದಾರೆ.

'ಬಹುತೇಕ ಕಲಾವಿದರು, ತಂತ್ರಜ್ಞರು ಮನೆಯಲ್ಲಿ ಸುರಕ್ಷಿತವಾಗಿದ್ದಾರೆಂದು ಭಾವಿಸಿರುತ್ತೇವೆ. ಆದರೆ ನನ್ನ ಅನೇಕ ಕಲಾವಿದ ಸ್ನೇಹಿತರು ಈ ಕೊರೋನ ಸಂದರ್ಭದಲ್ಲಿ ಜೀವನ ನಡೆಸುವುದಕ್ಕೆ ಕಷ್ಟಪಡುತ್ತಿದ್ದಾರೆ. ಹಾಗಾಗಿ ಈ ಸಮಯದಲ್ಲಿ ನನ್ನ ಸ್ನೇಹಿತರ ನೆರವಿಗೆ ನಿಲ್ಲಬೇಕಾದ್ದು ನನ್ನ ಕರ್ತವ್ಯ' ಎಂದು ಮನೋರಂಜನ್ ಹೇಳಿದ್ದಾರೆ.

ಸದ್ಯ ಮುಗಿಲ್ ಪೇಟೆ ಸಿನಿಮಾದಲ್ಲಿ ನಾನು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದೇನೆ. ನನ್ನ ಈ ಒಂದು ವರ್ಷದ ಪ್ರಾಜೆಕ್ಟ್ ನಲ್ಲಿ ನೂರಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದಾರೆ. ನನ್ನ ಸಿನಿಮಾಕ್ಕಾಗಿ ತನುಮನವನ್ನು ಅರ್ಪಿಸಿದ್ದಾರೆ. ಈಗ ಅವರ ಸಂಕಷ್ಟಕಾಲದಲ್ಲಿ ಅವರ ಜೊತೆಗೆ ಅವರ ಕಷ್ಟಕ್ಕೆ ಹೆಗಲು ಕೊಡಬೇಕಾಗಿರುವುದು ನನ್ನ ಜವಾಬ್ದಾರಿ. 

ಹೀಗಾಗಿ ಮುಗಿಲ್ ಪೇಟೆ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ನನ್ನ ಕಡೆಯಿಂದ 5 ಸಾವಿರ ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದು ನನ್ನವರಿಗಾಗಿ ಈ ಸಂದರ್ಭದಲ್ಲಿ ಕೈಲಾದ ಸಹಾಯ ಮಾಡುವ ಸಣ್ಣ ಪ್ರಯತ್ನ. ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ. ಸುರಕ್ಷಿತವಾಗಿರಿ ಎಂದು ಇದೇ ಸಂದರ್ಭದಲ್ಲಿ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT