'ಅಮೃತಮತಿ' ಚಿತ್ರದ ದೃಶ್ಯ 
ಸಿನಿಮಾ ಸುದ್ದಿ

ಲಾಸ್ ಏಂಜಲೀಸ್ ಫಿಲ್ಮ್ ಫೆಸ್ಟ್: 'ಅಮೃತಮತಿ' ಅತ್ಯುತ್ತಮ ಚಿತ್ರ, ಬರಗೂರು ರಾಮಚಂದ್ರಪ್ಪಗೆ 'ಅತ್ಯುತ್ತಮ ಚಿತ್ರಕಥೆ' ಪ್ರಶಸ್ತಿ

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ "ಅಮೃತಮತಿ" ಚಿತ್ರ ಇದಾಗಲೇ ಸಾಕಷ್ಟು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ.

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ "ಅಮೃತಮತಿ" ಚಿತ್ರ ಇದಾಗಲೇ ಸಾಕಷ್ಟು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ. ಇದೀಗ ಲಾಸ್ ಏಂಜಲೀಸ್ ಸನ್ ಫಿಲ್ಮ್ ಫೆಸ್ಟ್ ನಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಒಲಿಯುವುದರೊಡನೆ ಸ್ಯಾಂಡಲ್ ವುಡ್ ಹೆಮ್ಮೆ ಪಡುವಂತೆ ಮಾಡಿದೆ.

ಬರಗೂರು ರಾಮಚಂದ್ರಪ್ಪ ನಿರ್ದೇಶನದ ಈ ಚಿತ್ರಕ್ಕೆ ಅಟ್ಲಾಂಟಾ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರಶಸ್ತಿ ಲಭಿಸಿತ್ತು, ಈ ಬಾರಿ ಲಾಸ್ ಏಂಜಲೀಸ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ಚಿತ್ರಕಥೆ ವಿಭಾಗಗಳಲ್ಲಿ ಪ್ರಶಸ್ತಿ ಗಳಿಸಿದೆ.

ಜನ್ನನ ಯಶೋಧರ ಚರಿತೆ ಕಥೆಯಾಧಾರಿತ ಚಿತ್ರ ಇದಾಗಲೇ ಹತ್ತು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್  ಬ್ಯಾನರ್ ಅಡಿಯಲ್ಲಿ ಪುಟ್ಟಣ್ಣ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಕೊರೋನಾ ಸಂಕಷ್ಟ ಕಳೆದ ಮೇಲೆ ಅಮೃತಮತಿ ಸಿನಿಮಾ ದೇಶಾದ್ಯಂತ ಪ್ರದರ್ಶನ ಕಾಣಲಿದೆ ಎಂದು ನಿರ್ದೇಶಕ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT