ಫುಡ್ ಕಿಟ್ ವಿತರಣೆ 
ಸಿನಿಮಾ ಸುದ್ದಿ

ಕೊಡಗು: ಕೋವಿಡ್-19 ಸಂಕಷ್ಟದಲ್ಲಿರುವವರಿಗೆ ನಟ ಭುವನ್ ಪೊನ್ನಣ್ಣ ನೆರವಿನ ಹಸ್ತ

ಕೊರೋನಾ ಎರಡನೇ ಅಲೆಯಿಂದ ಹಲವಾರು ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಮಧ್ಯೆ ಸ್ಯಾಂಡಲ್‍ವುಡ್ ಕಲಾವಿದ ನಟ ಭುವನ್ ಪೊನ್ನಣ್ಣ ಕೊಡಗಿನ ಜನರಿಗೆ ಸಹಾಯ ಮಾಡುತ್ತಿದ್ದಾರೆ.

ಮಡಿಕೇರಿ: ಕೊರೋನಾ ಎರಡನೇ ಅಲೆಯಿಂದ ಹಲವಾರು ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಮಧ್ಯೆ ಸ್ಯಾಂಡಲ್‍ವುಡ್ ಕಲಾವಿದ ನಟ ಭುವನ್ ಪೊನ್ನಣ್ಣ ಕೊಡಗಿನ ಜನರಿಗೆ ಸಹಾಯ ಮಾಡುತ್ತಿದ್ದಾರೆ.

ನಟ ಭುವನ್ ಪೊನ್ನಣ್ಣ ಕೊರೋನಾ ವಾರಿಯರ್ ಆಗಿ ಜನಸೇವೆಗೆ ಧುಮುಕಿದ್ದಾರೆ. ಭುವನ್ ಪೊನ್ನಣ್ಣ ಅವರ ನಾಲ್ಕು ವರ್ಷದ 'ಭುವನಂ ಫೌಂಡೇಶನ್ ಎಂಬ ಟ್ರಸ್ಟ್ ಆರಂಭಿಸಿ ಸೋಂಕಿತರಿಗೆ ನೆರವನ್ನು ನೀಡುತಿದ್ದಾರೆ. ಈ ಲಾಕ್ ಡೌನ್ ಸಂದರ್ಭದಲ್ಲಿ ಫೌಂಡೇಷನ್ ಮೂಲಕ ಕೊಡಗಿನ ಜನರ ನೆರವಿಗೆ ನಿಂತಿದ್ದಾರೆ.

ಬಡವರು, ನಿರ್ಗತಿಕರಿಗೆ ಹದಿನೈದು ದಿನಗಳಿಗೆ ಆಗುವಷ್ಟು ಸುಮಾರು 200 ಆಹಾರ ಪದಾರ್ಥಗಳ ಕಿಟ್‌ ಗಳನ್ನು ವಿತರಣೆ ಮಾಡಿದ್ದಾರೆ. ಎರಡು ವಾರಗಳ ಕಾಲ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲಿರುವ 'ಭುವನಂ ಫೌಂಡೇಷನ್'ಗೆ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ನಲ್ಲಿ ಚಾಲನೆ ನೀಡಲಾಯಿತು. ಸ್ಥಳೀಯರಿಗೆ ಮತ್ತು ಹೋಂ ಗಾರ್ಡ್‍ಗಳಿಗೆ ಆಹಾರ ಪದಾರ್ಥಗಳ ಕಿಟ್ ಮತ್ತು ಮಾಸ್ಕ್ ಅನ್ನು ನಟ ಭುವನ್ ವಿತರಣೆ ಮಾಡಿದ್ದಾರೆ.

ಈ ಸಂದರ್ಭ ಮಡಿಕೇರಿ ನಗರ ಸಭೆ ಆಯುಕ್ತ ರಾಮದಾಸ್ ಜೊತೆಗಿದ್ದು, ನಗರದಲ್ಲಿ ಆಹಾರ ಪದಾರ್ಥಗಳ ಕಿಟ್ ಬೇಕಾಗಿರುವ ಏರಿಯಾಗಳಿಗೆ ಕರೆದೊಯ್ದು ಖುದ್ದು ನಿಂತು ಆಹಾರ ಪದಾರ್ಥಗಳನ್ನು ವಿತರಣೆ ಮಾಡಿಸಿದರು. ಈ ಸಂದರ್ಭ ಮಾತನಾಡಿದ ಭುವನ್ ಜಿಲ್ಲೆಯು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಔಷಧಿ ಕೊಳ್ಳಲು 15, 20 ಕಿಲೋಮೀಟರ್ ಹೋಗಬೇಕಾಗಿದೆ. ಇನ್ನು ಕೋವಿಡ್ ಎಂದ ಕೂಡಲೇ ಯಾರೂ ಆಟೋದವರು ಬರುವುದಿಲ್ಲ. ಹೀಗಾಗಿಯೇ ನಮ್ಮದೇ ತಂಡ ಇಂತಹವರ ನೆರವಿಗೆ ಧಾವಿಸಲಿದೆ. ಅಲ್ಲದೆ ಆಹಾರ ಪದಾರ್ಥಗಳು ಬೇಕಾದಲ್ಲಿ ಒದಗಿಸಲಿದೆ ಎಂದರು. ನಟಿ ಹರ್ಷಿಕಾ ಪೂಣಚ್ಚ, ಕೊಡಗಿನಲ್ಲಿ ನೆರೆ ಆಗುತ್ತಿದ್ದಂತೆ ಫೀಡ್ ಕರ್ನಾಟಕ ಆರಂಭಿಸಿದ್ದೇವೆ. ಕೊಡಗಿನ ಜನರಿಗೆ ಔಷಧಿ ಅಗತ್ಯ ಇರುವುದರಿಂದ ಸೇವೆಯನ್ನು  ಒದಗಿಸಲಿದ್ದೇವೆ ಎಂದು ಹೇಳಿದ್ದಾರೆ.

ನೆರವು ಬೇಕಾದವರು ತಮ್ಮನ್ನು ಸಂಪರ್ಕಿಸಬೇಕೆಂದು ಭುವನ್ ಮೊಬೈಲ್ ನಂಬರ್ (9945008004) ನೀಡಿದ್ದಾರೆ. ಗೋಣಿಕೊಪ್ಪ, ವಿರಾಜ ಪೇಟೆಯಲ್ಲಿ ಮೇ 25 ಮತ್ತು  ಮೇ 26 ರಂದು ಅಗತ್ಯವಿರುವವರಿಗೆ ಫುಡ್ ಕಿಟ್ ವಿತರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT