ರವಿಚಂದ್ರನ್ 
ಸಿನಿಮಾ ಸುದ್ದಿ

ಫುಡ್ ಕಿಟ್ ನೀಡುವ ಮೂಲಕ ಅವಮಾನ; ಪಬ್ಲಿಸಿಟಿಗಾಗಿ ಈ ಕೆಲಸ: ಹಿರಿಯ ನಟ ರವಿಚಂದ್ರನ್ ಅಸಮಾಧಾನ

ನನ್ನ ಜೇಬಿನಲ್ಲಿ ಒಂದು ರೂಪಾಯಿ ಇದ್ದರೆ ನಾಳೆಯೇ ಶೂಟಿಂಗ್ ಆರಂಭಿಸುತ್ತೇನೆ ಎಂದು ನಟ ರವಿಚಂದ್ರನ್ ಹೇಳಿದ್ದಾರೆ, ಬೇರೆ ಇಂಡಸ್ಟ್ರಿಗಳ ರೀತಿ ಸಿನಿಮಾ ರಂಗವೂ ಹೋರಾಟ ನಡೆಸುತ್ತಿದೆ ಎಂದು ಹಿರಿಯ ನಟ ರವಿಚಂದ್ರನ್ ಹೇಳಿದ್ದಾರೆ.

ನನ್ನ ಜೇಬಿನಲ್ಲಿ ಒಂದು ರೂಪಾಯಿ ಇದ್ದರೆ ನಾಳೆಯೇ ಶೂಟಿಂಗ್ ಆರಂಭಿಸುತ್ತೇನೆ ಎಂದು ನಟ ರವಿಚಂದ್ರನ್ ಹೇಳಿದ್ದಾರೆ, ಬೇರೆ ಇಂಡಸ್ಟ್ರಿಗಳ ರೀತಿ ಸಿನಿಮಾ ರಂಗವೂ ಹೋರಾಟ ನಡೆಸುತ್ತಿದೆ ಎಂದು ಹಿರಿಯ ನಟ ರವಿಚಂದ್ರನ್ ಹೇಳಿದ್ದಾರೆ.

ಕನ್ನಡ ಸಿನಿಮಾರಂಗಕ್ಕೆ ಬೇಕಿರುವುದು ಫುಡ್ ಕಿಟ್ ಅಲ್ಲ ಬದಲಿಗೆ ಕೆಲಸ ಎಂದು ಹೇಳಿದ್ದಾರೆ, ಕೆಲವು ಜನ ಕಷ್ಟ ಪಡುತ್ತಿರುವುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ, ಆದರೆ ಅವರಿಗೆ ಕೆಲಸ ಬೇಕಾಗಿದೆ. ಫುಡ್ ಕಿಟ್ ನೀಡುವ ಮೂಲಕ ಅವರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮಿಗಿಲಾಗೆ ಕೆಲವರು ಪಬ್ಲಿಸಿಟಿಗಾಗಿ ಈ ಕೆಲಸ ಮಾಡುತ್ತಿದ್ದಾರೆ. ಇದೆಲ್ಲಾ ಕಣ್ಣೊರೆಸುವ ತಂತ್ರವಾಗಿದೆ,  ನಿಮಗೆ ದಾನ ಮಾಡುವ ಮನಸ್ಸಿದ್ದರೇ ಅದನ್ನು ಪಬ್ಲಿಸಿಟಿ ಮಾಡುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಲಾಕ್‌ಡೌನ್ ಅನ್ನು ಏಪ್ರಿಲ್‌ನಲ್ಲಿ ಮೊದಲೇ ಜಾರಿಗೊಳಿಸಬೇಕಾಗಿತ್ತು. ಜನರು ಮನೆಯೊಳಗೆ ಇರಬೇಕೆಂದು ಸರ್ಕಾರ ಬಯಸಿದರೆ, ಅವರು ಅಗತ್ಯವಿರುವವರಿಗೆ ಸಹಾಯ ಮಾಡಲು ಹೊರಡಬೇಕು.

ಮತಕ್ಕಾಗಿ ಹಣ ನೀಡಲು ಬರುವ ರಾಜಕಾರಣಿಗಳಿಗೆ ಈಗ ಏಕೆ ಬರಲು ಆಗುತ್ತಿಲ್ಲ ಎಂದು ಪ್ರಶ್ನಿಸಿರುವ ರವಿಚಂದ್ರನ್ ನಾನು ಒಬ್ಬ ವ್ಯಕ್ತಿ, ಒಂದು ವೇಳೆ ನನ್ನ ಕೈಯ್ಯಲ್ಲಿ ಒಂದು ರೂಪಾಯಿ ಸಿಕ್ಕರೇ ನಾಳೆಯೇ ಶೂಟಿಂಗ್ ಆರಂಭಿಸುತ್ತೇನೆ, ಲಾಕ್ ಡೌನ್ ಎಲ್ಲವನ್ನು ತಡೆಹಿಡಿದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT