ಅಪ್ಪುಗೆ ಪಿಂಡ ಪ್ರದಾನ 
ಸಿನಿಮಾ ಸುದ್ದಿ

ಸಮಾಧಿ ಬಳಿ ಪುನೀತ್ ಪುಣ್ಯ ಸ್ಮರಣೆ: ನಟ ವಿನೋದ್ ರಾಜ್ ರಿಂದ ಅಪ್ಪುಗೆ ಪಿಂಡ ಪ್ರದಾನ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಣ್ಣೀರು ಹಾಕದವರೇ ಇಲ್ಲ. ಹೀಗಿರುವಾಗಿ ಇತರರ ಸಂಕಷ್ಟಕ್ಕೆ ಮಿಡಿಯುವ ನಟಿ ಲೀಲಾವತಿ ಮತ್ತು ಅವರ ಪುತ್ರ ವಿನೋದ್ ರಾಜ್ ಸ್ಪಂದಿಸದೇ ಇರಲು ಸಾಧ್ಯವೇ?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಣ್ಣೀರು ಹಾಕದವರೇ ಇಲ್ಲ. ಹೀಗಿರುವಾಗಿ ಇತರರ ಸಂಕಷ್ಟಕ್ಕೆ ಮಿಡಿಯುವ ನಟಿ ಲೀಲಾವತಿ ಮತ್ತು ಅವರ ಪುತ್ರ ವಿನೋದ್ ರಾಜ್ ಸ್ಪಂದಿಸದೇ ಇರಲು ಸಾಧ್ಯವೇ?

ಹೌದು. ಅಪ್ಪು ಇಹಲೋಕ ತ್ಯಜಿಸಿ 11ನೇ ದಿನವಾದ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಸಮಾಧಿ ಬಳಿ ಪುಣ್ಯ ಸ್ಮರಣೆ, ಪೂಜೆ ಮತ್ತಿತರ ವಿಧಿವಿಧಾನಗಳು ನಡೆದರೆ, ಮತ್ತೊಂದೆಡೆ ನಟ ವಿನೋದ್ ರಾಜ್ ತಾಯಿ ಲೀಲಾವತಿಯೊಡಗೂಡಿ ಶ್ರೀರಂಗಪಟ್ಟಣದ ಕಾವೇರಿ ತಟದ ಸಂಗಮದಲ್ಲಿ ಪುನೀತ್ ಗೆ ಪಿಂಡ ಪ್ರದಾನ ಮಾಡಿದ್ದಾರೆ.

ಸ್ಥಳೀಯ ವೈದಿಕರ ನೇತೃತ್ವದಲ್ಲಿ ವೈದಿಕ ಕ್ರಿಯೆಗಳನ್ನು ನೆರವೇರಿಸಿ ಆತ್ಮಕ್ಕೆ ಶಾಂತಿ, ಸದ್ಗತಿ ಕೋರಿದ್ದಾರೆ.

ಬಳಿಕ, ಆಶ್ಲೇಷಾ ಬಲಿ ಹಾಗೂ ನಾರಾಯಣ ಬಲಿಯನ್ನೂ ನೆರವೇರಿಸಿದರು. ಈ ಸಂದರ್ಭದಲ್ಲಿ ವಿನೋದ್ ರಾಜ್ ಅವರ ಆತ್ಮೀಯರು ಭಾಗಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT