ಒಪ್ಪಂದ ಸಿನಿಮಾ ಹಾಡುಗಳು ರಿಲೀಸ್ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ನಟನೆಯ 'ಒಪ್ಪಂದ' ಸಿನಿಮಾ ಹಾಡುಗಳು ನಾಲ್ಕು ಭಾಷೆಗಳಲ್ಲಿ ರಿಲೀಸ್

ಬಹುಭಾಷಾ ನಟ ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ ಹಾಗೂ ಖ್ಯಾತ ನಟ ಜೆ ಡಿ ಚಕ್ರವರ್ತಿ ಪ್ರಮುಖಪಾತ್ರದಲ್ಲಿ ನಟಿಸಿರುವ "ಒಪ್ಪಂದ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ ಹಾಗೂ ಖ್ಯಾತ ನಟ ಜೆ ಡಿ ಚಕ್ರವರ್ತಿ ಪ್ರಮುಖಪಾತ್ರದಲ್ಲಿ ನಟಿಸಿರುವ "ಒಪ್ಪಂದ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಇದೇ ಸಂದರ್ಭದಲ್ಲಿ ಟ್ರೇಲರ್ ಸಹ ಅನಾವರಣಗೊಂಡಿತು.

ನಿರ್ಮಾಪಕರಾದ ರೆಹಮಾನ, ಕೆ.ಮಂಜು, ಸೆವೆನ್ ರಾಜ್, ಫ್ಯಾಷನ್ ಡಿಸೈನರ್ ರಾಜೇಶ್ ಶೆಟ್ಟಿ, ಭವ್ಯಗೌಡ, ಮೋಹಿನಿ ಚೌಧರಿ ಮುಂತಾದ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.

ಈ ಚಿತ್ರ ಉತ್ತಮವಾಗಿ ಮೂಡಿಬರಲು ಅರ್ಜುನ್ ಸರ್ಜಾ, ಜೆ ಡಿ ಚಕ್ರವರ್ತಿ ಹಾಗೂ ರಾಧಿಕಾ ಕುಮಾರಸ್ವಾಮಿ ಅವರ ಸಹಕಾರ ಬಹಳ ಮುಖ್ಯ. ಅವರೆಲ್ಲರೂ ಚಿತ್ರದಲ್ಲಿ ಅಮೋಘವಾಗಿ ನಟಿಸಿದ್ದಾರೆ. ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಇದೇ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಸಮೀರ್‌‌ ತಿಳಿಸಿದರು.

ಅರ್ಜುನ್ ಸರ್ಜಾ ಅವರು ವಿಡಿಯೋ ಮೂಲಕ ಚಿತ್ರತಂಡಕ್ಕೆ ಶುಭಕೋರಿದರು. ಸಮೀರ್ ಅವರೇ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರಕ್ಕೆ ಅಮೀರ್ ಲಾಲ್ ಛಾಯಾಗ್ರಹಣ, ಸುಭಾಷ್ ಆನಂದ್ ಸಂಗೀತ ನಿರ್ದೇಶನ, ರಾಘು ಕುಲಕರ್ಣಿ ಕಲಾ ನಿರ್ದೇಶನ, ಅಮ್ಮ ರಾಜಶೇಖರ್ ನೃತ್ಯ ನಿರ್ದೇಶನ, ಖಾಲಿ ಕಿಕಾಸ್ ಸಾಹಸ ನಿರ್ದೇಶನ ಹಾಗೂ ಪ್ರಭು ಅವರ ಸಂಕಲನವಿದೆ.ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಅಮೀರ್ ಖಾನ್ ಸಹೋದರ ಫೈಸಲ್ ಖಾನ್, ಸೋ‌ನಿ ಚರಿಶ್ಟಾ, ವಿಶ್ವನಾಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT